ಹೆಣ್ಣು ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ- ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 3,ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ ಅವರು…

Read More

ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ: ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ,ವಿಜಯಪುರ, ನ. 10: ಒಂದು ಚಿತ್ರ ಸಾವಿರ ಪದಗಳಿಗೆ ಸಮವಾಗಿದ್ದು, ಫೋಟೋಗ್ರಫಿಯ ಕೌಶಲ್ಯಗಳನ್ನು ವಿದ್ಯಾರ್ಥಿನಿಯರು ಕಲಿಯುವುದು ಅತೀ ಅವಶ್ಯಕ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ, ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಸಹಯೋಗದೊಂದಿಗೆ ಸೋಮವಾರ ಹಮ್ಮಿಕೊಂಡಿದ್ದ ‘ಫೋಟೋಗ್ರಫಿ…

Read More

ಆಟವಾಡುತ್ತ ಬಾವಿಗೆ ಬಿದ್ದು ಬಾಲಕಿ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಬಾಲಕಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಇಂಡಿ ಪಟ್ಟಣ ಹೊರವಲಯದ ಧನಸಿಂಗ್ ತಾಂಡಾದಲ್ಲಿ ನಡೆದಿದೆ.ಅರ್ಚನಾ ರಾಠೋಡ (8) ಮೃತಪಟ್ಟ ಬಾಲಕಿ.ತಾಯಿಯೊಂದಿಗೆ ಕುರಿ ಮೇಯಿಸಲು ಹೋದಾಗ ಆಟವಾಡುತ್ತಾ ಆಕಸ್ಮಿಕವಾಗಿ ಬಾಲಕಿ ಅರ್ಚನಾ ಸೋಮವಾರ ಸಂಜೆ ಬಾವಿಯಲ್ಲಿ ಬಿದ್ದಿದ್ದಳು.ಅಗ್ನಿಶಾಮಕ ದಳದ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ನಡೆಸಿ ಮಂಗಳವಾರ ಬಾಲಕಿ ಶವವನ್ನು ಹೊರ ತೆಗೆದಿದ್ದಾರೆ. ಇಂಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More