
ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 27ರ ಬೆಳಿಗ್ಗೆ 6 ರಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ…