ಜಂತುಹುಳು ಬಾಧೆ: ಮಕ್ಕಳ ಬೆಳವಣಿಗೆಗೆ ಕಂಟಕ!
ಪೌಷ್ಟಿಕಾಂಶ ಕೊರತೆ, ರಕ್ತಹೀನತೆ ತಡೆಗೆ ಆರು ತಿಂಗಳಿಗೊಮ್ಮೆ ಮಾತ್ರೆ ಅಗತ್ಯ: ಡಾ. ಸಂಪತ್ ಗುಣಾರಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.10:ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ, ರಕ್ತಹೀನತೆ ಉಂಟಾಗುವುದರ ಜೊತೆಗೆ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯೂ ಕುಂಠಿತವಾಗುವ ಸಾಧ್ಯತೆ ಇದೆ. ಹೀಗಾಗಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅಗತ್ಯ ಎಂದು ಉತ್ತರ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಸಹಾಯಕ ನಿರ್ದೇಶಕ ಡಾ. ಸಂಪತ್ ಗುಣಾರಿ ಹೇಳಿದರು.ವಿಜಯಪುರ ನಗರದ ಹಬೀಬ್ನಗರದಲ್ಲಿರುವ…


