ಹೇಮರೆಡ್ಡಿ ಮಲ್ಲಮ್ಮಳ ಬದುಕು ಮನುಕುಲಕ್ಕೆ ಆದರ್ಶ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮೇ. 10: ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರೆಡ್ಡಿ ಮಲ್ಲಮ್ಮಳ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ರವಿವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೈವಭಕ್ತಿ, ತಪಸ್ಸು,…

Read More