ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ವಿರೋಧಿಸಿ ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 7:ಸರ್ಕಾರಿ ಶಾಲೆಗಳಲ್ಲಿ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿ ಹಾಗೂ ಶಿಕ್ಷಕರ ನೇಮಕಾತಿ ಕರಡು ಅಧಿಸೂಚನೆಗೆ ವಿರೋಧ ವ್ಯಕ್ತಪಡಿಸಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಪದಾಧಿಕಾರಿಗಳ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.ಈ ಸಂದರ್ಭದಲ್ಲಿ ಪರಿಷತ್ನ ಸಹ ಕಾರ್ಯದರ್ಶಿ ಮಯೂರಕುಮಾರ ತಿಳಗೂಳಕರ ಮಾತನಾಡಿ, ರಾಜ್ಯ ಸರ್ಕಾರವು ಈ ಶೈಕ್ಷಣಿಕ ವರ್ಷದಿಂದ 15 ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮಗಳಲ್ಲಿ ಬೋಧನೆ ನಡೆಸುವ ದ್ವಿಭಾಷಾ…


