ಯತ್ನಾಳ ಹೊಸ ಪಕ್ಷ ಸ್ಥಾಪನೆ ಇಂಗಿತ: ಬಿಜೆಪಿಯಲ್ಲಿ ಬೇಗುದಿ
ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಏ. 20:ಬಿಜೆಪಿ ಉಚ್ಚಾಟಿತ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುವುದಾಗಿ ಇಂಗಿತ ವ್ಯಕ್ತ ಪಡಿಸಿದ್ದಾರೆ.ಈ ಹಿಂದೆಯೂ ಹೊಸ ಪಕ್ಷ ಕಟ್ಟುವುದಾಗಿಯೂ ಹೇಳಿದ್ದರು. ಇದೀಗ ಮತ್ತೆ ಹೊಸ ಪಕ್ಷ ಹುಟ್ಟು ಹಾಕುವ ಮನದ ಇಂಗಿತನ್ನು ಬಿಚ್ಚಿಟ್ಟಿದ್ದಾರೆ.ಬಸವ ಜಯಂತಿ ಆಚರಣೆ ಶುಭ ಸಂದರ್ಭದಲ್ಲಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಯತ್ನಾಳ ಅವರು ಹೊಸ ಪಕ್ಷ ಕಟ್ಟುವ ವಿಚಾರ ಬಹಿರಂಗ ಪಡಿಸಿದ್ದಾರೆ.ಯತ್ನಾಳ ಈ ಬಾರಿ ನೂತನ ಪಕ್ಷ ಕಟ್ಟುವ…


