ಆನೆ ಬೆಲೆ ಎತ್ತಿಗೆ, ಎತ್ತಿನ ಬೆಲೆ ಕುರಿಗೆ, ಕುರಿ ಬೆಲೆ ಕೋಳಿಗೆ, ಕೋಳಿ ಬೆಲೆ ಮನುಷ್ಯನಿಗೆ ಅಂದರೆ ಮನುಷ್ಯನಿಗೆ ಯಾವ ಕಿಮ್ಮತ್ತೂ ಉಳಿದಿಲ್ಲ:ಶಿವಯ್ಯ ಸ್ವಾಮೀಜಿಗಳ ಕಾಲಜ್ಞಾನ ಭವಿಷ್ಯ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಶುದ್ಧ, ನಂಬಿಕೆ, ಕರ್ತವ್ಯ ಒಂದೆಡೆ ಸೇರಿದರೆ ಜಗತ್ತು ಉದ್ಧಾರವಾಗುತ್ತದೆ. ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧ ನಡೆದರೆ ಇಲ್ಲಿಯೂ ಇದ್ದಂತೆ. ಅಕ್ರಾಳ, ವಿಕ್ರಾಳ, ಕರಾಳ ಈ ಬಾರಿಯೂ ಇದ್ದದ್ದೇ, ಯುದ್ದ ಅಲ್ಲಿ ಅಷ್ಟೇ ಅಲ್ಲ ಇಲ್ಲಿಯೂ ಇದ್ದಂತೆಯೇ ಎಂದು ಕತಕನಹಳ್ಳಿಯ ಶ್ರೀ ಶಿವಯ್ಯ ಮಹಾಸ್ವಾಮೀಜಿ ಕಾಲಜ್ಞಾನದ ಹೇಳಿಕೆ ನುಡಿದರು.ಸುಕ್ಷೇತ್ರ ಕತಕನಹಳ್ಳಿಯಲ್ಲಿ ಶ್ರೀ ಗುರುಚಕ್ರವರ್ತಿ ಸದಾಶಿವ ಮುತ್ತ್ಯಾ ಅವರ ಜಾತ್ರಾ ಮಹೋತ್ಸವ ಪ್ರಯುಕ್ತ ಗುರು ಕರುಣೆಯ ಮೂಲಕ ಶ್ರೀ ಶಿವಯ್ಯ ಮಹಾಸ್ವಾಮೀಜಿ ಭವಿಷ್ಯದ ಕಾಲಜ್ಞಾನ ಹೇಳಿಕೆ…


