ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ – ಬಸನಗೌಡ ಪಾಟೀಲ ಹರನಾಳ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14: ಶರಣರ ವಚನಗಳೇ ಮಾನವ ಹಕ್ಕುಗಳ ಮೂಲ. ಆದರ್ಶ ಸಮಾಜದ ನಿರ್ಮಾಣದಲ್ಲಿ ಅವರು ನೀಡಿದ ಸಂದೇಶಗಳು ನಮ್ಮೆಲ್ಲರ ಜೀವನವನ್ನು ಬದಲಿಸುವ ದಿಕ್ಸೂಚಿಗಳಾಗಿವೆ ಎಂದು ವಿಜಯಪುರದ ಜಾಗತಿಕ ಲಿಂಗಾಯತ ಮಹಾಸಭೆಯ ಅಧ್ಯಕ್ಷ ಬಸನಗೌಡ ಪಾಟೀಲ ಹರನಾಳ ಅಭಿಪ್ರಾಯಪಟ್ಟರು. ರವಿವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ನೀಲಮ್ಮ ಮುತ್ತಪ್ಪ ಸಂಕಣ್ಣನವರ ದತ್ತಿ, ದಿ. ಪ್ರೊ.ತಿಪ್ಪಣ್ಣ ಕರೆಪ್ಪ ಕಲ್ಯಾಣಗೋಳ ದತ್ತಿ, ದಿ. ರಾಮಗೊಂಡಪ್ಪ ನಿಂಗಪ್ಪ ನಾಗಠಾಣ ದತ್ತಿ, ದಿ. ಗಂಗಾಧರ ಕೋರಳ್ಳಿ ದತ್ತಿ…


