ಹಸಿವು ಮುಕ್ತ ಸೇವೆಯ 100ನೇ ವಾರ: ನೂರಾರು ನಿರ್ಗತಿಕರಿಗೆ ಅನ್ನದಾನ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ದೇಶ ರಕ್ಷಕರ ಪಡೆ ಸಂಚಾಲಿತ ಅನ್ನ ಸ್ನೇಹಿ ಸೇವಾ ಬಳಗ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ “ಹಸಿವು ಮುಕ್ತ ಸೇವಾ ಕಾರ್ಯಕ್ರಮ”ದ 100ನೇ ವಾರವನ್ನು ಶುಕ್ರವಾರ ಯಶಸ್ವಿಯಾಗಿ ಆಚರಿಸಲಾಯಿತು.ನಗರದ ವಿವಿಧ ಭಾಗಗಳಲ್ಲಿ ಬೇರೆ ಊರಿಗೆ ತೆರಳುವ ಪ್ರಯಾಣಿಕರು, ನಿರ್ಗತಿಕರು ಹಾಗೂ ಆಶ್ರಯಹೀನರಿಗೆ ಉಚಿತವಾಗಿ ಬಿಸಿ ಊಟ ವಿತರಿಸಲಾಯಿತು.ಈ ಉದಾತ್ತ ಅನ್ನದಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆ ಆವರಣ, ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಹಾಗೂ ನಗರದ ಪ್ರಮುಖ ವೃತ್ತಗಳ ರಸ್ತೆ ಬದಿಯಲ್ಲಿ ವಾಸಿಸುವ…


