
ಸ್ವಚ್ಚತೆ ಕಾಪಾಡುವ ಪೌರಕಾರ್ಮಿಕರ ಪಾತ್ರ ಮಹತ್ವವಾಗಿದೆ -ಮಡಿವಾಳಪ್ಪ ಕರಡಿ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 23:ಗ್ರಾಮ, ಪಟ್ಟಣ ಹಾಗೂ ನಗರವನ್ನು ಸ್ವಚ್ಛವಾಗಿರಿಸಿ ಸುಂದರವಾಗಿಸುವಲ್ಲಿ ಪೌರ ಕಾರ್ಮಿಕರ ಕಾರ್ಯ ಮಹತ್ವದ್ದಾಗಿದೆ ಎಂದು ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಹೇಳಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಇವರ ಸಹಯೋಗದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರದ ಸ್ವಚ್ಚತೆ ಹಾಗೂ ನೈರ್ಮಲ್ಯ ಕಾಪಾಡಲು ಪ್ರತಿನಿತ್ಯ ಶ್ರಮಿಸುವ ಪೌರಕಾರ್ಮಿಕರ ಸೇವೆ ಅನನ್ಯವಾಗಿದೆ. ಸ್ವಚ್ಛತಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ…