ಪುನರ್ವಸತಿ ವಿಳಂಬ ಬೇಡ; ಮೂಲಸೌಕರ್ಯ ಕಲ್ಪಿಸಿ ಕಾಮಗಾರಿ ತ್ವರಿತಗೊಳಿಸಿ
ಖಾಜಾ ನಗರ–ಟಿಪ್ಪು ನಗರದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು.31:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿ, ಮಂಜೂರಾಗಿರುವ ಜಾಗದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಬುರಣಾಪುರ ಗ್ರಾಮದ ಸರ್ವೇ ನಂ.67/1ರಲ್ಲಿ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರು ಮಾಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆ ಸ್ವಾಗತಿಸಿದ್ದು, ಜಮೀನು ಮಂಜೂರಿನಲ್ಲೇ…


