ಬಸವ ಜನ್ಮಸ್ಥಳ ಇಂಗಳೇಶ್ವರದಿಂದ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗಕ್ಕೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಶ್ವಗುರು ಬಸವಣ್ಣ ಅವರ ಜನ್ಮಸ್ಥಳ ಇಂಗಳೇಶ್ವರದಿಂದ ಬಸವಕಲ್ಯಾಣ ಮಾರ್ಗವಾಗಿ ಐಕ್ಯಸ್ಥಳ ಕೂಡಲ ಸಂಗಮದವರೆಗೆ ಹೊಸ ರೈಲು ಮಾರ್ಗ ನಿರ್ಮಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗಿದೆ.ಇಂಗಳೇಶ್ವರ ಗ್ರಾಮದ ಅಗ್ಗಳ ಕವಿ ಪ್ರತಿಷ್ಠಾನ ಹಾಗೂ ಗ್ರಾಮಸ್ಥರ ಪರವಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಪರ ಜಿಲ್ಲಾಧಿಕಾರಿ ಈದ್ರಾಮ್ ಅವರ ಮೂಲಕ ಶನಿವಾರ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಗ್ಗಳ ಕವಿ ಪ್ರತಿಷ್ಠಾನದ ಸಂಸ್ಥಾಪಕ ಅಧ್ಯಕ್ಷ ನಾಗಪ್ಪ ಚಿಗರಿ ಮಾತನಾಡಿ, ಇಂಗಳೇಶ್ವರದಿಂದ ಆರಂಭವಾಗುವ ರೈಲು…

Read More

ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More