ಚಡಚಣ ತಾಲೂಕಿಗೆ ಜಿಲ್ಲಾಧಿಕಾರಿ ಡಾ. ಆನಂದ ದಿಢೀರ ಭೇಟಿ,ಪರಿಶೀಲನೆ
ಸಪ್ತಸಾಗರ ವಾರ್ತೆ, ವಿಜಯಪುರ,ಜ.28: ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಬುಧವಾರ ದಿಢೀರಾಗಿ ಚಡಚಣ ತಾಲೂಕಿನ ವಿವಿಧ ತಾಲೂಕಾ ಕಚೇರಿಗಳಿಗೆ ಭೇಟಿ ನೀಡಿ ಕಚೇರಿಯಲ್ಲಿನ ಕಾರ್ಯ ವ್ಯವಸ್ಥೆ ಕುರಿತು ಪರಿಶೀಲನೆ ನಡೆಸಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆ ನೀಡಿದರು.ಚಡಚಣ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿಯ ಕುರಿತು ಸರಕಾರಕ್ಕೆ ಗಮನಕ್ಕೆ…


