ಎಲ್.ಇ.ಡಿ ದೀಪ ಅಳವಡಿಕೆ ಯೋಜನೆಯಿಂದ ಪಾಲಿಕೆ ಆರ್ಥಿಕ ಹೊರೆ ಇಳಿಕೆ: ಯತ್ನಾಳ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 7: ನಗರದಲ್ಲಿ ಹಾಲಿ ಇರುವ ಸಾಂಪ್ರದಾಯಿಕ ಬೀದಿ ದೀಪಗಳನ್ನು ಬದಲಾಯಿಸಿ ಕೇಂದ್ರಿಕೃತ ಚಾಲನೆ ಮತ್ತು ನಿರ್ವಹಣೆಯುಳ್ಳ ಇಂಧನ ಕ್ಷಮೆತೆಯ ಎಲ್.ಇ.ಡಿ ದೀಪಗಳನ್ನು ಅಳವಡಿಸುವ ಯೋಜನೆ ಶೀಘ್ರದಲ್ಲೇ ಅನುಷ್ಠಾನಗೊಳಿಸಲಾಗುವುದು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಿಜಯಪುರ ನಗರದ ಸುಮಾರು 36.36 ಕೋಟಿ ಮೊತ್ತದ ಎಲ್.ಇ.ಡಿ ದೀಪಗಳ ಅಳವಡಿಕೆ ಯೋಜನೆ ಅನುಷ್ಠಾನಗೊಳಿಸಲು ಅನುಮೋದಿಸಿರುವುದಾಗಿ ಗುರುವಾರ ವಿಧಾನಸೌಧದಲ್ಲಿ ಜರುಗಿದ ಅರ್ಜಿಗಳ ಸಮಿತಿ ಸಭೆಗೆ ಹಾಜರಿದ್ದ…


