ಶಾಲಾ ದಶಮಾನೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 19: ಯಶಸ್ವಿ ಹತ್ತು ವರ್ಷಗಳನ್ನು ಪೂರೈಸಿರುವ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಸಮಾರಂಭ ಡಿ.26 ಮತ್ತು ಡಿ.27 ರಂದು ನಡೆಯಲಿದ್ದು,ಗುರುವಾರ ಸಂಜೆ ಗ್ರಾಮದ ಶ್ರೀ ಉದಯಲಿಂಗೇಶ್ವರ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು.ಶ್ರೀಗಳು ಮಾತನಾಡಿ, ಶಾಲೆಯು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅಕ್ಷರ ಜ್ಞಾನ ನೀಡುವ ಜತೆಗೆ ಸಂಸ್ಕಾರ ಕಲಿಸಿ…

Read More

ಚೊಚ್ಚಲ ಕೃತಿಗೆ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.5: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2025-26ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ 50 ಯುವ ಬರಹಗಾರರ ಹಸ್ತ ಪ್ರತಿಗಳ ಪ್ರಕಟಣೆಗೆ ರೂ.15,000 ಪ್ರೋತ್ಸಾಹ ಧನ ನೀಡಲಾಗುವುದು. ಅರ್ಜಿದಾರರು 18 ರಿಂದ 40 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಪ್ರಾಧಿಕಾರದ ಅರ್ಜಿ ನಮೂನೆಯೊಂದಿಗೆ ದೃಢಿಕೃತ ಎಸ್.ಎಸ್.ಎಲ್.ಸಿ.ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ…

Read More

ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…

Read More

ವೃಕ್ಷೋತ್ಥಾನ ಹೆರಿಟೇಜ್ ರನ್ ಗೆ ಟಿ. ಭೂ ಬಾಲ್ ನರಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.10: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025 ರಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ರಾಜ್ಯ ಇ- ಆಡಳಿತ ಇಲಾಖೆಯ ನಾಗರಿಕರಿಗೆ ವಿದ್ಯುನ್ಮಾನ ಸೇವೆ ಪೂರೈಕೆ ನಿರ್ದೇಶಕ(Electronic Delivery Of Citizen Services) ಟಿ. ಭೂಬಾಲನ್ ಅವರಿಗೆ ಆಹ್ವಾನ ನೀಡಲಾಗಿದ್ದು, ಈ ಆಮಂತ್ರಣಕ್ಕೆ ಅವರು ಒಪ್ಪಿಗೆ ಸೂಚಿಸಿದ್ದಾರೆ.ಬುಧವಾರ ಬೆಂಗಳೂರಿನಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2025ರ ರಾಯಭಾರಿ ಮತ್ತು ಭಾರತೀಯ ರೇಲ್ವೆಯ ಹಿರಿಯ ಅಧಿಕಾರಿ ಪ್ರವೀಣ ಕಾತರಕಿ ಮತ್ತು ಕೈಗಾರಿಕೆ…

Read More

ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.2:2025-26ನೇ ಸಾಲಿಗೆ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ಸೆ. 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ…

Read More

ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ.2 :ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ಯ ವತಿಯಿಂದ ಬಾಲಕರಿಗಾಗಿ ಹೊಯ್ಸಳ ಮತ್ತು ಬಾಲಕಿಯರಿಗಾಗಿ ಕೆಳದಿ ಚನ್ನಮ್ಮ ಪ್ರಶಸ್ತಿಗಾಗಿ ನಾವೀನ್ಯತೆ,ತಾರ್ಕಿಕ ಸಾಧನೆಗಳು,ಕ್ರೀಡೆ,ಕಲೆ, ಸಾಂಸ್ಕೃತಿಕ ಮತ್ತು ಸಂಗೀತ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಪ್ರತಿ ಕ್ಷೇತ್ರದಿಂದ ಇಬ್ಬರು ಮಕ್ಕಳಂತೆ ಎಂಟು ಮಕ್ಕಳನ್ನು ಆಯ್ಕೆ ಮಾಡಲಾಗುವುದು.ಈ ಪ್ರಶಸ್ತಿಯು ತಲಾ ರೂ.10 ಸಾವಿರ ನಗದು ಬಹುಮಾನ ಒಳಗೊಂಡಿದ್ದು, 5 ರಿಂದ 18 ವರ್ಷದೊಳಗಿನ ಮಕ್ಕಳು ಅಗತ್ಯ ದಾಖಲೆ ಸಹಿತ ಸೆಪ್ಟೆಂಬರ್ 30…

Read More

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ ೨೦೨೪-೨೫ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.೮೦ ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಧರಿಸಲಾಗಿದೆ. ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಶಾಲೆಯ ಧೃಢೀಕೃತ ಎಸ್.ಎಸ್.ಎಲ್.ಸಿ. ಮತ್ತು ಧೃಢೀಕೃತ ಕಾಲೇಜಿನ ದ್ವಿತೀಯ ಪಿ.ಯು.ಸಿ ಅಂಕಪಟ್ಟಿ, ಆಧಾರ ಕಾರ್ಡ್, ವಿದ್ಯಾರ್ಥಿಯ ಬ್ಯಾಂಕ್…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More