ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…


