ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…

Read More

ವಿಜಯಪುರದಲ್ಲಿ ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.14: ರಾಜ್ಯದಲ್ಲಿ ಉಂಟಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಂಗಳವಾರ ವಿಜಯಪುರ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ರೈತರನ್ನು ಭೇಟಿ ಮಾಡಿ ಬೆಳೆ ಹಾನಿ, ನೀರಿನ ಸಮಸ್ಯೆ ಹಾಗೂ ಕೃಷಿ ಸಂಕಷ್ಟದ ಕುರಿತು ಮಾಹಿತಿ ಸಂಗ್ರಹಿಸಿದರು.ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜೆಡಿಎಸ್ ರಚಿಸಿರುವ ವಿಶೇಷ ಅಧ್ಯಯನ ತಂಡದ ನೇತೃತ್ವದಲ್ಲಿ ಈ ಪ್ರವಾಸ ನಡೆಯಿತು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರೊಂದಿಗೆ…

Read More

ಬರ ಅಧ್ಯಯನಕ್ಕೆ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ತಂಡ ನಾಳೆ ವಿಜಯಪುರ ಜಿಲ್ಲೆ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಕರ್ನಾಟಕ ಪ್ರದೇಶ ಯುವ ಜನತಾದಳದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಅಧ್ಯಯನ ತಂಡವು ಜುಲೈ 14ರಂದು ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಲಿದೆ.ಈ ಪ್ರವಾಸವು ರಾಜ್ಯದಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಅಧ್ಯಯನದ ಭಾಗವಾಗಿದೆ.ತಂಡದಲ್ಲಿ ಜನತಾದಳ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಕೋರ್ ಕಮಿಟಿ ಅಧ್ಯಕ್ಷ ಎಂ. ಕೃಷ್ಣಾರೆಡ್ಡಿ, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು…

Read More

ಬಿಜೆಪಿ ಜತೆಗೆ ಜೆಡಿಎಸ್ ವಿಲೀನ ಸಾಧ್ಯವಿಲ್ಲ: ನಿಖಿಲ್

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16: ನಮ್ಮ ಶಕ್ತಿ ಬಿಜೆಪಿಗೆ ಧಾರೆ ಎರೆದಿದ್ದೇವೆ. ಬಿಜೆಪಿ ಶಕ್ತಿ ನಮಗೆ ಧಾರೆ ಎರೆದಿದ್ದಾರೆ. ಭ್ರಷ್ಟ ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ಹೋರಾಡುತ್ತಿದ್ದೇವೆ. ಹೀಗಾಗಿ ಎರಡು ಪಕ್ಷ ವಿಲೀನ ಆಗುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.ಮೈತ್ರಿಯ ವಿಮಾನ ಹತ್ತಿದ್ದೇವೆ. ಅದು ಟರ್ಬ್ಯೂಲೆನ್ಸ್ ಆಗುವುದು ಸಹಜ. ಮಧ್ಯದಲ್ಲಿ ಕೆಲವು ಪ್ರಯಾಣಿಕರು ಇಳಿಯುವಂತೆ ಹೇಳಿದರೆ ಅದು ಸಾಧ್ಯವಾಗದು. ಇನ್ನೂ ಜೆಡಿಎಸ್ ಸೈದ್ಧಾಂತಿಕವಾಗಿ…

Read More

ಧರ್ಮಸ್ಥಳ ವಿವಾದ :ಹಿಂದೂಗಳ ಭಾವನೆ ಕೆರಳಿಸುವ ಕೆಲಸ: ಬಸನಗೌಡ ಟೀಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 29 :ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ವಿನಾಕಾರಣ ಗೊಂದಲ ಸೃಷ್ಟಿಸಿ ಹಿಂದೂಗಳ ಭಾವನೆಯನ್ನು ಕಾಂಗ್ರೆಸ್ ಸರ್ಕಾರ ಕೆರಳಿಸುವ ಕೆಲಸ ಮಾಡಿದೆ. ಇದೊಂದು ಅನೈತಿಕ ಸರ್ಕಾರ. ಈ ಸರ್ಕಾರ ಕಿತ್ತೊಗೆಯಲು ಜನರಲ್ಲಿ ಜಾಗೃತಿ ಮೂಡಿಸಲು ಸಂಘಟಿತ ಹೋರಾಟ ನಡೆಸಲಾಗುವುದು. ಸುಕ್ಷೇತ್ರ ಧರ್ಮಸ್ಥಳ ವಿಷಯದಲ್ಲಿ ಕೈ ಹಾಕಿರುವ ಕಾಂಗ್ರೆಸ್ ಉಳಿಗಾಲ ಇಲ್ಲ ಎಂದು ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ಬಸನಗೌಡ ಮಾಡಗಿ (ತುಂಬಗಿ) ಹೇಳಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವಾಲಯ ಹಾಗೂ ಭಕ್ತಿ ಸ್ಥಳದ ಮೇಲೆ ರಾಜಕಾರಣ ಸಲ್ಲ. ಜೆಡಿಎಸ್…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಸಿದ್ಧರಾಮಯ್ಯ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಕೈಯಲ್ಲಿ ಕೊಟ್ಟಿದ್ದಾರೆ- ನಿಖಿಲ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೂ ರಾಜ್ಯದ ಚುಕ್ಕಾಣಿಯನ್ನು ರಣದೀಪ್ ಸುರ್ಜೇವಾಲ ಅವರ ಕೈಯಲ್ಲಿ ಕೊಟ್ಟಿದ್ದಾರೆ. ಸೂಪರ್ ಸಿಎಂ ಸುರ್ಜೇವಾಲಾ ಆಗಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ಟೀಕಿಸಿದರು.ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಜನರೊಂದಿಗೆ ಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ನಿಖಿಲ್ ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ವಿಜಯಪುರ ಜಿಲ್ಲೆಗೆ ₹ 4557 ಕೋಟಿ ಅನುದಾನ ಘೋಷಣೆ. ಇದು ಪ್ರಚಾರಕ್ಕೆ ಮಾತ್ರ ಸೀಮಿತವಾಗಿ ಎಂದು ನಿಖಿಲ್ ಕಾಂಗ್ರೆಸ್ ನಾಯಕರ ವಿರುದ್ಧ…

Read More

ಇಂಡಿಯಲ್ಲಿ ಜೆಡಿಎಸ್ ಮುಖಂಡ ನಿಖಿಲ್ ರೋಡ್ ಶೋ

ಸಪ್ತಸಾಗರ ವಾರ್ತೆ ವಿಜಯಪುರ, ಜು. 16:ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ಇಂಡಿ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು.ನಿಖಿಲ್ ಕುಮಾರಸ್ವಾಮಿ ಅವರು ಇಂಡಿ ತಾಲೂಕಿನ ಅಂಜುಟಗಿ ಗ್ರಾಮದ ರಾಯಣ್ಣ ಸರ್ಕಾಲ್ ನಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.ನಂತರ ನೂರಾರು ಕಾರ್ಯಕರ್ತರುಗಳ ಜತೆಗೂಡಿ ಬೈಕ್ ರ್‍ಯಾಲಿ ನಡೆಸಿದರು. ಪಕ್ಷದ ಕಾರ್ಯಕರ್ತರು ರಸ್ತೆ ಪಕ್ಕದಲ್ಲೇ ಜೈಕಾರ ಕೂಗುತ್ತಾ ರೋಡ್ ಶೋ ಮೆರವಣಿಗೆಯಲ್ಲಿ ಪಾಲ್ಗೊಂಡರು.ಅನಂತರ ಇಂಡಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅವರು…

Read More

ನಮ್ಮದು ಅಭಿವೃದ್ಧಿ ಪರ ಸರ್ಕಾರ: ಸಿದ್ದರಾಮಯ್ಯ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಭಾಗಿ

ಸಪ್ತಸಾಗರ ವಾರ್ತೆ, ಜು. 14:ನಮ್ಮದು ಅಭಿವೃದ್ಧಿಪರ ಸರ್ಕಾರ. ಬಿಜೆಪಿ ಅಪಪ್ರಚಾರಕ್ಕೆ ಅಭಿವೃದ್ಧಿ ಮೂಲಕವೇ ಉತ್ತರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಸೋಮವಾರ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.4157…

Read More