ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…


