ಪೌರಕಾರ್ಮಿಕರಿಗೆಉಚಿತಮಧುಮೇಹಚಿಕಿತ್ಸೆ: ಡಾ. ಬಾಬುರಾಜೇಂದ್ರನಾಯಕಘೋಷಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 3 : ಜಿಲ್ಲೆಯ ಮನಗೂಳಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರವು ಯಶಸ್ವಿಯಾಗಿ ನೆರವೇರಿತು.ಈ ಶಿಬಿರವನ್ನು ಶ್ರೀ ತುಳಸಿಗಿರೀಶ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ, ಖ್ಯಾತ ಮಧುಮೇಹ ತಜ್ಞ ಡಾ. ಬಾಬುರಾಜೇಂದ್ರ ನಾಯಿಕ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿಯ ತಾಲೂಕಾಧ್ಯಕ್ಷ ಮಹೇಶ ಪಿರಗಾ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಡಿಎಸ್ ಧುರೀಣ ಸೋಮನಗೌಡ ಪಾಟೀಲ ವಹಿಸಿಕೊಂಡಿದ್ದರು.ಕಾರ್ಯಕ್ರಮದ ಉದ್ಘಾಟನೆಯನ್ನು ವಿಶ್ವನಾಥಗೌಡ ಪಾಟೀಲ ನೆರವೇರಿಸಿದವರು. ಡಾ. ಬಾಬುರಾಜೇಂದ್ರ…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More

ಶಿಕ್ಷಣ ಕ್ರಾಂತಿಯ ಹರಿಕಾರರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು : ರಂಗನಾಥ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಸಮಾಜದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾದರೆ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತದೆ ಎಂಬ ಮಾತಿನಂತೆಸುತ್ತೂರು ಕ್ಷೇತ್ರದ ಲಿಂ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹುಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು ಆಚರಿಸಿದವರು ಎಂದು ಬರಹಗಾರ ರಂಗನಾಥ ಥೋರ್ಪೆ ಹೇಳಿದರು.ವಿಜಯಪುರ ನಗರದ ಬಿ ಎಲ್ ಡಿ ಈ ಸಂಸ್ಥೆಯ ಎಸ್. ಎಸ್.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ…

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More

ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ-ಉಪಮನ್ಯು ಶಿವಾಚಾರ್ಯ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಅನಾದಿ ಕಾಲದಿಂದಲೂ ಗುರುವನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ, ಪರಂಪರೆ ಭಾರತದಲ್ಲಿದೆ.ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ ಎಂದು ಬೀದರ ಜಿಲ್ಲೆಯ ಐನಾಪುರ ಹಿರೇಮಠದ ಷ ಬ್ರ ಉಪಮನ್ಯು ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಸೋಮವಾರದಂದು ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಗುರು ಪರಂಪರೆಗೆ ನಮ್ಮ ನಾಡಿನಲ್ಲಿ ದೊಡ್ಡ ಇತಿಹಾಸವೇ ಇದೆ. ಗುರು ಎಂದರೆ ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ರಾಜಮಾರ್ಗ ಎಂದು ಹೇಳಿದರು.ಅಗರಖೇಡ…

Read More

ಜೀವನದಲ್ಲಿ ಗುರಿ ಮುಖ್ಯ: ಸಾಧನೆಗೆ ಪರಿಶ್ರಮ ಅಗತ್ಯ-ಶಂಕರಗೌಡ ಸೋಮನಾಳ

ಸಪ್ತಸಾಗರ ವಾರ್ತೆ, ವಿಜಯಪುರ,ಆ.25:ಜೀವನದಲ್ಲಿ ಗುರಿ ಮುಖ್ಯ. ನಿಗದಿಪಡಿಸಿಕೊಂಡ ಗುರಿಯೊಂದಿಗೆ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಪರಿಶ್ರಮ ಅಗತ್ಯ ಎಂದು ಮಹಿಳಾ ವಿಶ್ವ ವಿದ್ಯಾಲಯದ ರಜಿಸ್ಟ್ರಾರ್ ಶಂಕರಗೌಡ ಸೋಮನಾಳ ಅವರು ಹೇಳಿದರು.ಸೋಮವಾರ ಪರ್ಲ್ಸ್ ಕ್ಯಾಂಪಸ್‌ನಲ್ಲಿರುವಸರಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಹಯೋಗದೊಂದಿಗೆ ಪರಿಶಿಷ್ಟ ಪಂಗಡ ಉಪಯೋಜನೆಯಡಿಶಾಲಾ ವಿದ್ಯಾರ್ಥಿನಿಯರಿಗೆ ಆರು ತಿಂಗಳ ಕಾಲ ನೃತ್ಯಕಲಾ ತರಬೇತಿ ಶಿಬಿರದ ಕಾರ್ಯಕ್ರಮಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.ಎಲ್ಲರಲ್ಲೂ ಅಗಾಧವಾದ…

Read More

ಮನೆ ಮನೆಗೂ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.25:ನಗರದ ಪ್ರಸಿದ್ಧ ಕಾಮಿತಾರ್ಥಪ್ರದ ಶ್ರೀನಿವಾಸ ದೇವಸ್ಥಾನದ ಆವರಣದಲ್ಲಿ ನಡೆಯುವ ಭವ್ಯ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮ ಮತ್ತು ಮನೆ ಮನೆಗೂ ಶ್ರೀನಿವಾಸ ಕಾರ್ಯಕ್ರಮಕ್ಕೆ ಗುರುಗಳು ಚಾಲನೆ ನೀಡಿದರು.ಶ್ರೀಪಂ. ಸಂಜೀವ ಆಚಾರ ಮಧಬಾವಿ ಅವರ ನೇತೃತ್ವದಲ್ಲಿ ಮತ್ತು ಸಂಜೀವ ದೇಸಾಯಿ ಅವರ ಮಾರ್ಗದರ್ಶನದಿಂದ ಕಾರ್ಯಕ್ರಮ ಜರುಗುವುದು.ಗುರುಗಳ ಮಂತ್ರಾಕ್ಷತೆ ಅನುಗ್ರಹದಿಂದ ಬರುವ ಗುರುವಾರದಿಂದ ಕಾರ್ಯಕ್ರಮ ನಡೆಯುತ್ತಿದೆ. ಭಾಗ್ಯನಗರಕೆ ನಮ್ಮ ತಂಡದವರು ಆಗಮಿಸಿದ್ದರು. ಸಂಚಾಲಕ ಸಂಜೀವ ದೇಸಾಯಿ ಹಾಗೂ ಸದ್ಯಸರಾದ ಕೃಷ್ಣಾಜೀ ಕುಲಕರ್ಣಿ, ಗೋವಿಂದರಾಜ ದೇಶಪಾಂಡೆ, ಆನಂದ ಕುಲಕರ್ಣಿ, ಗುರುರಾಜ…

Read More

ಕಾಮಗಾರಿಗಳ ಸಮರ್ಪಕ ಅನುಷ್ಠಾನಕ್ಕೆ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಕಡ್ಡಾಯ- ಡಾ.ವಿಜಯಕುಮಾರ ಆಜೂರ

ಸಪ್ತಸಾಗರ ವಾರ್ತೆ, ವಿಜಯಪುರ, ಆ.25: ಮನರೇಗಾ ಯೋಜನೆಯ ಕಾಮಗಾರಿಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಕೇಂದ್ರ ಸರ್ಕಾರವು ಹೊಸ ವಿಧಾನವಾಗಿ ಜಿಯೋ ಫೆನ್ಸಿಂಗ್ ಮೊಬೈಲ್ ಆ್ಯಪ್ ಮೂಲಕ ಜಿಪಿಎಸ್ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಡಾ. ವಿಜಯಕುಮಾರ ಆಜೂರ ಹೇಳಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನಗೊಳ್ಳುವ ಕಾಮಗಾರಿಗಳಿಗೆ ಜಿಯೋ ಫೆನ್ಸಿಂಗ್ ಆ್ಯಪ್ ಮೂಲಕ ಅದರ ಪ್ರಕ್ರಿಯೆಗಳ ಬಗ್ಗೆ ಕರ್ತವ್ಯ ನಿರ್ವಹಿಸುವ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಏರ್ಪಡಿಸಿದ ಒಂದು ದಿನದ ತರಬೇತಿ…

Read More

ಆದ್ಯ ವಚನಕಾರ ದೇವರ ದಾಸಿಮಯ್ಯ ಜಾಡ ಕುಲತಿಲಕ – ಡಾ. ಎಂ.ಎಸ್. ದಡ್ಡೇನವರ

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 24:ದೇವರ ದಾಸಿಮಯ್ಯನವರು ಬಸವಪೂರ್ವ ಶರಣ, ಆದ್ಯ ವಚನಕಾರನಾಗಿ ಹನ್ನೆರಡನೇ ಶತಮಾನದ ಅನುಭವ ಮಂಟಪದ ಎಲ್ಲ ಶರಣರಿಗೆ ಮಾರ್ಗದರ್ಶಿ ವಚನಗಳನ್ನು ಮೊದಲ ಬಾರಿಗೆ ಸರಳವಾಗಿ ನೀಡಿದ ಮಹಾನುಭಾವರು. ಇಂದು ಅವರ ಹೆಸರಿನಲ್ಲಿ ಸಭಾಭವನ ಉದ್ಘಾಟನೆಗೊಳ್ಳುತ್ತಿರುವದು ಬಹಳ ಸಂತೋಷ. ದಾಸಿಮಯ್ಯನವರು ಜಾಡ ಕುಲತಿಲಕರಾಗಿದ್ದಾರೆ ಎಂದು ಡಾ. ಎಂ. ಎಸ್. ದಡ್ಡೆನವರ ಹೇಳಿದರು.ರವಿವಾರ ನಗರದ ವೇದಮಾತೆ ಗಾಯತ್ರಿ ಪ್ರತಿಷ್ಠಾನದ ಆವರಣದಲ್ಲಿ ಆದ್ಯವಚನಕಾರ ದೇವರ ದಾಸಿಮಯ್ಯ ಸಭಾಭವನ ಉದ್ಘಾಟಿಸಿ ಮಾತನಾಡಿದ ಅವರು, ನೇಕಾರ ಸಮಾಜದ ಆದ್ಯಗುರುವಾದ ದಾಸಿಮಯ್ಯನವರು…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More