ಗ್ಯಾರಂಟಿಗಳಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿ.ಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಅರಸೀಕೆರೆ, ಜು.26:ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ನುಡಿದರುಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲಿ, ಸದನದಲ್ಲಿ ಕ್ಷೇತ್ರದ ಬಗ್ಗೆ ಧ್ವನಿ ಎತ್ತುವುದರಲ್ಲ ಶಾಸಕ ಶಿವಲಿಂಗೇಗೌಡರು ಮುಂದಿದ್ದಾರೆ. ನಾಲ್ಕು ಬಾರಿ ಚುನಾವಣೆಯಲ್ಲಿ ಗೆದ್ದಿರುವ ಅವರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು…

Read More

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More

ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಅಸಂಘಟಿತ ಕಾರ್ಮಿಕರ ಜೀವನ ಮಟ್ಟ ಸುಧಾರಣೆಗೆ ಕ್ರಮ : ಸಚಿವ ಸಂತೋಷ ಲಾಡ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಸಣ್ಣ ವೃತ್ತಿ ಕೈಗೊಂಡು, ವೃತ್ತಿಯನ್ನೇ ಅವಲಂಬಿಸಿ ಶ್ರಮಿಜೀವಿಯಾಗಿ ತಮ್ಮ ಜೀವನ ನಿರ್ವಹಿಸುತ್ತಿರುವ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಹಾಗೂ ಜೀವನ ಮಟ್ಟ ಸುಧಾರಣೆಗೆ ಸರ್ಕಾರ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯದಾದ್ಯಂತ ವಿವಿಧ ವೃತ್ತಿಗಳಲ್ಲಿ ತೊಡಗಿರುವ 91 ಅಸಂಘಟಿತ ವರ್ಗಗಳ…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತ: ಸಂಸದ ಜಿಗಜಿಣಗಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 13:ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸಂಪೂರ್ಣ ಕುಂಠಿತಗೊಂಡಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದರು.ಭಾನುವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯದಲ್ಲಿ ಕಾಂಗ್ರೆಸ್ ಎಟಿಎಂ ಸರ್ಕಾರವಾಗಿದೆ. ಆದರೆ ಡೆಬಿಟ್ ಅಕೌಂಟ್ ನಲ್ಲಿ ಹಣವೇ ಇಲ್ಲ ಎಂದು ಛೇಡಿಸಿದರು.ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹೊರಗುತ್ತಿಗೆ ಆಧಾರದ ಕೆಲಸಗಾರರಿಗೂ ಸಂಬಳವಿಲ್ಲ.ತಮ್ಮರು ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ದಲಿತಪರ ಸರ್ಕಾರಿ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಇಲ್ಲ. ಎಲ್ಲವೂ ಗ್ಯಾರಂಟಿ ಯೋಜನೆಗಳಿಗೆ ಹಣ ಸೋರಿ ಹೋಗುತ್ತಿದೆ. ಗ್ಯಾರಂಟಿಯಿಂದ…

Read More

ಮಹಾಬಳೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ ನೇತೃತ್ವದಲ್ಲಿ ಗಂಗಾ ಪೂಜೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 10:ಉತ್ತರ ಕರ್ನಾಟಕ ಜೀವನಾಡಿ ಕೃಷ್ಣಾ ನದಿಯ ಉಗಮಸ್ಥಾನವಾದ ನೆರೆ ರಾಜ್ಯ ಮಹಾರಾಷ್ಟ್ರ ರಾಜ್ಯದ ಸಾತಾರಾ ಜಿಲ್ಲೆಯ ಮಹಾಬಳೇಶ್ವರ ಪಂಚಗಂಗಾ ದೇವಸ್ಥಾನಕ್ಕೆ ತೆರಳಿದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಯ ಅನ್ನದಾತರು ಮಾಜಿ ಸಚಿವ ಸಂಗಣ್ಣ ಬೆಳ್ಳುಬ್ಬಿ ಅವರ ನೇತೃತ್ವದಲ್ಲಿ 19 ನೇ ವರ್ಷದ ಗಂಗಾಪೂಜೆ ಸಲ್ಲಿಸಿ ಕೃಷ್ಣೆಗೆ ಬಾಗಿನ ಅರ್ಪಿಸಿದರು. ಮುಂಗಾರು ಆರಂಭವಾಗುವದರೊಂದಿಗೆ ಬರುವ ಕಡ್ಲಿಗರ ಪೂರ್ಣಿಮೆ ದಿನದಂದು ಈ ಭಾಗದ ನೂರಾರು ಮಣ್ಣಿನ ಮಕ್ಕಳು ಮಹಾಬಳೇಶ್ವರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.ಈ…

Read More

ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ಆಗ್ರಹಿಸಿ ಕರವೇ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 9 : ಕರ್ನಾಟಕದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಈ ಬಗ್ಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಮಾತನಾಡಿ, ಕರ್ನಾಟಕ ರಾಜ್ಯದ ಪಠ್ಯಕ್ರಮದಲ್ಲಿ ಸಾಧಾರಣವಾಗಿ ಕನ್ನಡವನ್ನು ಪ್ರಥಮ ಭಾಷೆಯಾಗಿ ಕನ್ನಡವನ್ನು, ದ್ವಿತೀಯ ಭಾಷೆಯಾಗಿ ಇಂಗ್ಲಿಷನ್ನು ಮತ್ತು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಸಲಾಗುತ್ತಿದೆ. ರಾಜ್ಯ…

Read More