ಮಳೆ ಅಭಾವ ಪರಿಸ್ಥಿತಿ ಎದುರಿಸಲು ಸಜ್ಜಾಗಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅಧಿಕಾರಿಗಳಿಗೆ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 3:ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ…


