ಜ್ಞಾನ-ಪರಿಜ್ಞಾನ ಇದ್ದಾಗ ಮಾತ್ರ ಪತ್ರಕರ್ತ ಯಶಸ್ಸು ಗಳಿಸಲು ಸಾಧ್ಯ: ಸಂತೋಷ ಚಿನಗುಡಿ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಪತ್ರಕರ್ತನಿಗೆ ಜ್ಞಾನ ಮತ್ತು ಪರಿಜ್ಞಾನ ಇದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರಜಾವಾಣಿಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವುಮನ್ ಮೀಡಿಯಾ ಕ್ಲಬ್ ಉದ್ಘಾಟಿಸಿ ಅವರು ಮಾತನಾಡಿದರು.ಪತ್ರಿಕೋದ್ಯಮವು ಕೇವಲ ತರಗತಿ ಕೋಣೆಗೆ ಸೀಮಿತವಾಗಿರದೆ, ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ. ಪತ್ರಿಕೆಗಳನ್ನು ಕೇವಲ ನೋಡದೆ, ಅವನ್ನು ನಿಯಮಿತವಾಗಿ ಓದಿದಾಗ…

Read More

ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚೆಚ್ಚು ಓದಿ:ಡಾ. ಜೆ. ಎಸ್. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ವಿಜಯಪುರ, ಮಾ. 24:ಇವತ್ತಿನ ಯುವ ಜನಾಂಗದಲ್ಲಿ ಓದುವ ಹವ್ಯಾಸ ಕಡಿಮೆಯಾಗಿದ್ದು ಅತ್ಯಂತ ವಿಷಾದದ ಸಂಗತಿಯಾಗಿದೆ. ಜ್ಞಾನ ಸಂಪಾದನೆ ಮತ್ತು ಇತಿಹಾಸ ಪ್ರಜ್ಞೆ ರೂಢಿಸಿಕೊಳ್ಳಬೇಕಾದರೆ ಯುವಕರು ಹೆಚ್ಚು ಹೆಚ್ಚು ಓದಿನಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಈ ದಿನ ಡಾಟ್ ಕಾಮ್‌ನಿಂದ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಿರುವುದು ಪ್ರಶಂಸನೀಯ ಎಂದು ಪ್ರಗತಿಪರ ಚಿಂತಕ ಡಾ. ಜೆ.ಎಸ್.ಪಾಟೀಲ್ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜೈ ಹಿಂದ್,…

Read More

ವಿದ್ಯಾರ್ಥಿಗಳಿಗೆ ನೈಜ ಜ್ಞಾನ ಅವಶ್ಯ:ಡಾ. ಜೌದ್ರಾಮ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 17: ವಿದ್ಯಾರ್ಥಿಗಳಿಗೆ ಬರೀ ಅಂಕಗಳು ಮುಖ್ಯ ಅಲ್ಲ, ಸರ್ವತೋಮುಖ ಅಭಿವೃದ್ಧಿಗೆ ನೈಜ‌ ಜ್ಞಾನ ಅವಶ್ಯ ಎಂದು ಬಾಗಲಕೋಟೆ ವಿಶ್ವವಿದ್ಯಾಲಯ ಕುಲಸಚಿವ ಡಾ. ಜೌದ್ರಾಮ ಹೇಳಿದ್ದಾರೆ.ಮಂಗಳವಾರ ನಗರದ ಎ.‌ ಎಸ್.‌‌ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ನಾತಕೋತ್ತರ ನಿರ್ವಹಣೆ ಅಧ್ಯಯನ ಮತ್ತು ಸಂಶೋಧನ ಕೇಂದ್ರದ ಪ್ರಥಮ ವರ್ಷದ ಎಂ.ಬಿ.ಎ. ವಿದ್ಯಾರ್ಥಿಗಳಿಗಾಗಿ ನಡೆದ ಪರಿಚಯಾತ್ಮಕ ಕಾರ್ಯಕ್ರಮದ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ಕೇವಲ ಪಠ್ಯ ಅಧ್ಯಯನ, ಫಲಿತಾಂಶಕ್ಕೆ ಗಮನ ನೀಡದೇ ಸಾಮಾನ್ಯ ಜ್ಞಾನ, ವ್ಯವಹಾರ ಜ್ಞಾನಕ್ಕೂ ಪ್ರಾಶಸ್ತ್ಯ…

Read More

ವಿದ್ಯೆ ಎಂಬುದು ಅಭ್ಯಾಸ ಮಾಡುವವನ ಕೈವಶವಾಗುತ್ತದೆ-ಐಹೊಳ್ಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15:ಜೀವನದಲ್ಲಿ ಯಾರು ಸಾಧನೆ ಮಾಡಬೇಕೆಂದು ಬಯಸಿ ಅಭ್ಯಾಸವನ್ನು ಮಾಡುತ್ತಾರೋ ಅವರ ಸಾಧನೆಗೆ ವಿದ್ಯೆಯ ಫಲಗಳು ಬರುತ್ತವೆ. ಶಿವಯೋಗಿ ಸಿದ್ದರಾಮರು ಇದನ್ನು ತಮ್ಮ ವಚನದಲ್ಲಿ ಪ್ರಸ್ತಾಪಿಸಿದ್ದಾರೆ. ಅವಿದ್ಯೆ ಹೋಗಲಾಡಿಸಲು ನಾವೆಲ್ಲ ಸಾಧನಾಶೀಲರಾಗಿ ಸಾಧಿಸಬೇಕೆಂದು ಫ .ಗು. ಹಳಕಟ್ಟಿ ಸಂಶೋಧನಾ ಕೇಂದ್ರದ ಸಂಯೋಜನಾಧಿಕಾರಿ ಡಾ.ವ್ಹಿ.ಡಿ. ಐಹೊಳ್ಳಿ ಇಂದಿಲ್ಲಿ ಅಭಿಪ್ರಾಯ ಪಟ್ಟರು. ನಗರದ ಆಶ್ರಮ ರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೇಯ ದೇವಸ್ಥಾನದಲ್ಲಿ ಹಮ್ಮಿಕೊಂಡ 549ನೇ ಸತ್ಸಂಗ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.ವಾಚಿಸಿ ಅನುಭವಿ…

Read More

ವೇದಗಳು ಪ್ರಾಚೀನ ಭಾರತದ ಜ್ಞಾನದ ಮೂಲ-ವಿನಾಯಕ ಭಟ್

ಸಪ್ತಸಾಗರ ವಾರ್ತೆ ವಿಜಯಪುರ, ಜು. 21:ಪಂಚಮುಖಿ ಶಿಕ್ಷಣವು ಐದು ಮುಖಗಳನ್ನು ಹೊಂದಿರುವ ಶಿಕ್ಷಣ ವ್ಯವಸ್ಥೆ. ಇದು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಗದಗ ಧಾರವಾಡದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಸಂಸ್ಕೃತ ಅಧ್ಯಾಪಕ ವಿನಾಯಕ ಭಟ್ ಶೇಡಿಮನೆ ಹೇಳಿದರು.ರವಿವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜರುಗಿದ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭದ ಗೋಷ್ಠಿ-2 ರಲ್ಲಿಪಂಚಮುಖಿ ಶಿಕ್ಷಣ-ವಿಷಯದ ಕುರಿತು ಉಪನ್ಯಾಸ ನೀಡಿ…

Read More

ಗುರುಗಳು ಪ್ರಗತಿಪರ ಚಿಂತಕರಾಗಬೇಕು- ಡಾ. ಕನ್ನೂರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 13:ಗುರುವಿನ ಸ್ಥಾನ ಶ್ರೇಷ್ಠವಾದದ್ದು. ಅವರು ಶಿಷ್ಯರಿಗೆ ಮಾರ್ಗದರ್ಶಕರಾಗಿ ಮುನ್ನಡೆಸುವವರು. ಅವರಿಂದ ಆತ್ಮ ಜ್ಞಾನ ದೊರಕುತ್ತದೆ. ಪರಮಾನಂದವನ್ನು ಹೊಂದಲು ಸಾಧ್ಯವಿದೆ. ಗುರು ಭಗವಂತನ ಪ್ರತಿನಿಧಿಯಾಗಿ ಭೂಮಿಯ ಮೇಲೆ ಇರುತ್ತಾನೆ .ಜಾತಿ ,ಧರ್ಮ ಎಲ್ಲವನ್ನು ಮೀರಿ ಸಮಾನತೆಯ ತತ್ವದಲ್ಲಿ ವಿದ್ಯೆಯನ್ನು ದಾನ ಮಾಡುತ್ತಾನೆ ಎಂದು ಬಿಡಿಈ ಸಂಸ್ಥೆಯ ಪದವಿ ಮಹಿಳಾ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಸುಭಾಷ ಕನ್ನೂರ ಹೇಳಿದರು.ನಗರದ ಆಶ್ರಮರಸ್ತೆಯ ಐಶ್ವರ್ಯ ಬಡಾವಣೆಯ ವರದಾಂಜನೆಯ ದೇವಸ್ಥಾನದಲ್ಲಿ ನಡೆದ ೫೪೫ ನೇ ಮಾಸಿಕ ಸತ್ಸಂಗ ಕಾರ್ಯಕ್ರಮದಲ್ಲಿ…

Read More