ಓದುವ ಸಂಸ್ಕೃತಿ ಬೆಳೆಸಿಕೊಳ್ಳಬೇಕು: ಕುಶಾಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 10 :ಪುಸ್ತಕಗಳಿಂದ ಮನೆ ಶೃಂಗಾರಗೊಂಡರೆˌ ಮಕ್ಕಳ ಮನಸ್ಸು ಜ್ಞಾನದಿಂದ ಶೃಂಗಾರವಾಗುತ್ತದೆ ಎಂದು ಕನ್ನಡ ಪುಸ್ತಕಪ್ರಾಧಿಕಾರದ ಜಿಲ್ಲಾ ಜಾಗೃತ ಸಮಿತಿ ಸದಸ್ಯ ಡಾ. ಕುಶಾಲ ಬರಗೂರ ಹೇಳಿದರು.ನಗರದ ಸ್ವಾತಂತ್ರ‍್ಯಯೋಧರ ಕಾಲನಿಯ ಸಾಹಿತಿ ಸಂಗಮೇಶ ಬದಾಮಿ ಅವರನಿವಾಸದಲ್ಲಿ ಹಮ್ಮಿಕೊಂಡ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.ದೇವರ ಮನೆಯಲ್ಲಿ ದೇವರು ಕಾಣುವ ಹಾಗೆ ಮನೆ ಪ್ರವೇಶಿಸಿದೊಡನೆ ಗ್ರಂಥಗಳು ಕಾಣಬೇಕು. ಅಂದಾಗ ಓದುವ ಸಂಸ್ಕೃತಿ ಬೆಳೆಯುತ್ತದೆ. ಮೊಬೈಲ್ ಗೀಳುಕಡಿಮೆಯಾಗಿˌ ಓದುವ ಆಸಕ್ತಿ ಹೆಚ್ಚುತ್ತದೆ ಎಂದರು.ಅತಿಥಿ ಶಂಕರ ಬೈಚಬಾಳ…

Read More