ನಾನು ಶಾಸಕನಾದ ಬಳಿಕ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ-ಸಚಿವ ಶಿವಾನಂದ ಪಾಟೀಲ
ಸಪ್ತಸಾಗರ ವಾರ್ತೆ, ನಿಡಗುಂದಿ/ಆಲಮಟ್ಟಿ :ಅಖಂಡ ವಿಜಯಪುರ ಜಿಲ್ಲೆಯ ಜನರು ಭೂಮಿ, ಮನೆ, ಬದುಕು ಕಳೆಕೊಂಡರೂ ಕುಡಿಯಲು ನೀರಿಗೂ ಪರದಾಟ ನಡೆಸಿದ್ದೆವು. ಆದರೆ 2004 ರಲ್ಲಿ ನಾನು ಬಸವನಬಾಗೇವಾಡಿ ಕ್ಷೇತ್ರದಿಂದ ಶಾಸಕನಾದ ಬಳಿಕವೇ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ ದೊರಕಿದ್ದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶನಿವಾರ ನಿಡಗುಂದಿ ತಾಲೂಕಿನ ವಂದಾಲ ಗ್ರಾಮದಲ್ಲಿ ರೈಲ್ವೇ ಸ್ಟೇಷನ್ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,…


