ಸಾಲದ ಬಾಧೆ: ನೇಣಿಗೆ ಶರಣಾದ ರೈತ
ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಜಿಲ್ಲೆಯ ಇಂಡಿ ತಾಲೂಕಿನ ತಡವಲಗಾ ಗ್ರಾಮದಲ್ಲಿ ಸಾಲದ ಬಾಧೆಯಿಂದ ಮನನೊಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.ಪ್ರಾಥಮಿಕ ಮಾಹಿತಿಯಂತೆ, ಮಳೆಯ ಕೊರತೆ ಹಾಗೂ ಸಾಲ ಮರುಪಾವತಿ ಚಿಂತೆಯೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.ಮೃತರನ್ನು ನಾಗಪ್ಪ ಭೀಮಶ್ಯಾ ಅಥರ್ಗಾ (57) ಎಂದು ಗುರುತಿಸಲಾಗಿದೆ. ಅವರು ತಮ್ಮ ತೋಟದ ವಸತಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕುಟುಂಬದ ಮಾಹಿತಿಯ ಪ್ರಕಾರ, ರೈತರು ಕೋಟಕ್ ಮಹೀಂದ್ರ ಬ್ಯಾಂಕ್ನಲ್ಲಿ ₹15 ಲಕ್ಷ, ತಡವಲಗಾ ಸಹಕಾರಿ ಸಂಘದಲ್ಲಿ ₹65 ಸಾವಿರ…


