ರಮಜಾನ್ ಹಬ್ಬದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಶನಿವಾರ ರಂಜಾನ್ ಅಂಗವಾಗಿ ನಗರದ ದಖನಿ‌ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೋಂಡ ನಾನಾ ಮುಖಂಡರು ಮತ್ತು ಜನರೊಂದಿಗೆ ಸಚಿವರು ಶುಭಾಷಯ ವಿನಿಮಯ ಮಾಡಿದರು.ಸಹೋದರತೆ ಮತ್ತು ಸಮಾನತೆ…

Read More

ವಿಜಯಪುರದ ಸಂಚಾರ ವ್ಯವಸ್ಥೆಗೆ ಬೇಕಿದೆ ಮೇಜರ್ ಸರ್ಜರಿ:ಓಬೇರಾಯನ ಕಾಲದ ಸಂಚಾರಿ ವ್ಯವಸ್ಥೆಗೆ ಗುಡ್ ಬೈ ಯಾವಾಗ?

ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ ವಿಜಯಪುರ, ಮಾ. 9:ವಿಶ್ವಖ್ಯಾತ ಗೋಳಗುಮ್ಮಟ ನಗರಿ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ತುಕ್ಕು ಹಿಡಿದಿದ್ದು, ಶೀಘ್ರವಾಗಿ ಬೆಳವಣಿಗೆ ಹೊಂದುತ್ತಿರುವ ವಿಜಯಪುರ ನಗರದಲ್ಲಿ ಸಂಚಾರ ವ್ಯವಸ್ಥೆಗೆ ಕೂಡಲೇ ಮೇಜರ್ ಸರ್ಜರಿ ಬೇಕಿದೆ.ಹೌದು. ಕಳೆದ ಹತ್ತಾರು ವರ್ಷಗಳಿಂದ ವಿಜಯಪುರ ಮಹಾನಗರದಲ್ಲಿ ತುಕ್ಕು ಹಿಡಿದ ಸಂಚಾರ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಇದರಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳಿಗೆ ನಗರದಲ್ಲಿ ಸಂಚರಿಸಲು ತುಂಬಾ ಕಷ್ಟವಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಮಹಾನಗರದಲ್ಲಿ ಜನಸಂಖ್ಯೆಯ ಜೊತೆ ಜೊತೆಯಲ್ಲಿಯೇ ವಾಹನಗಳ ಸಂಖ್ಯೆಯು ದ್ವಿಗುಣವಾಗುತ್ತಿದೆ. ಪಾದಚಾರಿಗಳಷ್ಟೇ…

Read More

ಟ್ರಂಪ್ ಧೋರಣೆ ಸರಿಯಲ್ಲ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ಒಂದು ರಾಷ್ಟ್ರದ ಆಧ್ಯಕ್ಷನ ಹತ್ಯೆ ಮಾಡುವುದು, ಅವರನ್ನು ಕರೆದೊಯ್ದಿದ್ದು ಸರಿಯಲ್ಲ. ಅಮೆರಿಕ ಆದ್ಯಕ್ಷ ಟ್ರಂಪ್ ಮಾಡುವುದು ಸರಿಯಲ್ಲ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಖಮನೈ ಹತ್ಯೆಗೆ ಭಾರತದಲ್ಲಿ ಪ್ರತಿಭಟನೆ ಮಾಡಿದ್ದರ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಒಬ್ಬರ ಸ್ವಾಯತ್ತತೆಯಲ್ಲಿ ಕೈಹಾಕುವುದು ಸರಿಯಲ್ಲ. ಇದು ಸರಿಯಾದ ಧೋರಣೆ ಅಲ್ಲ. ಇದಕ್ಕೆ ಬೆಂಬಲಿಸಿದರೆ ನಮಗೂ ಹೀಗೆ ಆಗುತ್ತದೆ ಎಂದರು.ಜಾಗತಿಕ ನಾಯಕರ ಜೊತೆಗೆ ಚರ್ಚೆ ಮಾಡಿ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು….

Read More

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.16: ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…

Read More

ಜಿರಿಯಾಟ್ರಿಕ್ ಕಾನ್ಸೆಪ್ಟ್ ಎರಡನೇ ಆವೃತ್ತಿ ಪುಸ್ತಕ ಬಿಡುಗಡೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ. ಎಲ್. ಡಿ.‌ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಜೆರಿಯಾಟ್ರಿಕ್ಸ್ ವಿಭಾಗದ ವತಿಯಿಂದ ಸಂಪಾದಿಸಲಾದ ಜಿರಿಯಾಟ್ರಿಕ್ ಕಾನ್ಸೆಪ್ಟ್ (Geriatric Concepts) ಪುಸ್ತಕದ ಎರಡನೇ ಆವೃತ್ತಿಯನ್ನು ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಸೋಮವಾರ ಬಿಡುಗಡೆ ಮಾಡಿದರು.ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪುಸ್ತಕ ಬಿಡುಗಡೆ ಮಾಡಿ‌ ಮಾತನಾಡಿದ ಅವರು, ಈ ಪುಸ್ತಕವು ವೈದ್ಯಕೀಯ, ನರ್ಸಿಂಗ್, ಫಾರ್ಮಾ ಮತ್ತು ಭೌತಚಿಕಿತ್ಸೆ ವಿದ್ಯಾರ್ಥಿಗಳಿಗೆ ಅತ್ಯಂತ…

Read More