ಇದು ಬಜೆಟ್ ಅಲ್ಲ, ಕೇವಲ ಘೋಷಣಾ ಪತ್ರ: ಉಮೇಶ ಟೀಕೆ
ಸಪ್ತಸಾಗರ ವಾರ್ತೆ ವಿಜಯಪುರ, ಮಾ. 6:ಒಳ ಮೀಸಲಾತಿ ವಿಷಯವಾಗಿ ಯಾವ ಸೂಕ್ತ ನಿರ್ಧಾರವನ್ನು ಪ್ರಸಕ್ತ ಬಜೆಟ್ ವೇಳೆಯಲ್ಲಿ ಕೈಗೊಳ್ಳದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ, ಇದು ಬಜೆಟ್ ಆಗಿರದೇ ಕೇವಲ ಘೋಷಣಾ ಪತ್ರವಾಗಿದೆ ಎಂದು ಭಾರತೀಯ ಜನತಾ ಪಕ್ಷದ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಅಸಮಾಧಾನ ಹೊರಹಾಕಿದ್ದಾರೆ.ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಒಳ ಮೀಸಲಾತಿ ಜಾರಿಯ ಬಗ್ಗೆ ಯಾವ ನಿರ್ಧಾರವನ್ನು ಪ್ರಕಟಿಸದ ಮುಖ್ಯಮಂತ್ರಿಗಳು ದಲಿತ ವರ್ಗಕ್ಕೆ ಅನ್ಯಾಯ…


