ಕನ್ಹೇರಿ ಶ್ರೀಗಳು ಕ್ಷಮಾಪಣೆ ಕೇಳಿದ್ದರೆ ವಿವಾದವೇ ಆಗುತ್ತಿರಲಿಲ್ಲ- ಸಚಿವ ಎಂ. ಬಿ. ಪಾಟೀಲ
If Kanheri Shree had apologized, there would have been no controversy — Minister M. B. Patil.
If Kanheri Shree had apologized, there would have been no controversy — Minister M. B. Patil.
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 27: ಬಬಲೇಶ್ವರ- ವಿಜಯಪುರ ಮತ್ತು ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಮಂಗಳವಾರದಿಂದ ಪ್ರಾರಂಭವಾಗಿದೆ.ಸಾರವಾಡ ಗ್ರಾಮಸ್ಥರ ಬೇಡಿಕೆ ಹಿನ್ನೆಲೆಯಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೀ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಈ ಬಸ್ ಸೇವೆ ಪ್ರಾರಂಭಿಸುವಂತೆ ಸೂಚನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಈ ಬಸ್ ಸೇವೆ ಪ್ರಾರಂಭಿಸಿದೆ.ಮಂಗಳವಾರ ಬಬಲೇಶ್ವರ ಬಸ್ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಾಳೆ…
ಸಪ್ತಸಾಗರ ವಾರ್ತೆ ವಿಜಯಪುರ, ಆ. 20: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ಸಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು ನಗರ ನಿವಾಸಿ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ…
ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…
ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 16:ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು..18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಅಂದು ಬೆಳಗ್ಗೆ 9ಗಂಟೆಗೆ ಸಚಿವರ ಗೃಹ ಕಚೇರಿಯಲ್ಲಿ ದಿ ನ್ಯೂ ಯಾರ್ಕ್ ಟೈಮ್ಸ್ ವರದಿಗಾರರೊಂದಿಗೆ ಸಂದರ್ಶನ ನೀಡಲಿದ್ದಾರೆ.ಮಧ್ಯಾಹ್ನ 12ಗಂಟೆಗೆ ಡಿಸಿಸಿ ಬ್ಯಾಂಕ್ ಹತ್ತಿರ ಆಲಕುಂಟೆ ನಗರದಲ್ಲಿ ಆಯೋಜಿಸಲಾದ ಉತ್ತರ ಕರ್ನಾಟಕ ಶಾಮಿಯಾನ ಸಂಘದ ವತಿಯಿಂದ 4ನೇ ಮಹಾ ಅಧಿವೇಶನ ಹಾಗೂ ಮಳಿಗೆಗಳ ಪ್ರದರ್ಶನ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.ನಂತರ ಮಧ್ಯಾಹ್ನ 3ಗಂಟೆಗೆ ತಿಕೋಟಾ…