ಬರದ ಬಿಗಿ ಮುಷ್ಟಿಗೆ ವಿಜಯಪುರ ರೈತ
ಶೇ.17ರಷ್ಟು ಮಾತ್ರ ಬಿತ್ತನೆ; ಪೈರು ಒಣಗುವ ಹಂತಕ್ಕೆ | ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯಪುರ ಜಿಲ್ಲೆಯಲ್ಲಿ ಬರದ ಆತಂಕ ಗಂಭೀರವಾಗಿದ್ದು, ಬಿತ್ತನೆ ಮಾಡಿರುವ ಪೈರುಗಳು ಒಣಗುವ ಹಂತ ತಲುಪಿವೆ. ಜಿಲ್ಲೆಯಾದ್ಯಂತ ಈವರೆಗೆ ಕೇವಲ ಶೇ.17ರಷ್ಟು ಮಾತ್ರ ಬಿತ್ತನೆಯಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಬಿತ್ತನೆಯೇ ನಡೆದಿಲ್ಲ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಲಿದ್ದು, ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ನಿಖರ ಹಾಗೂ ವೈಜ್ಞಾನಿಕ ವರದಿ ಸಿದ್ಧಪಡಿಸುವಂತೆ…


