ಬರದ ಬಿಗಿ ಮುಷ್ಟಿಗೆ ವಿಜಯಪುರ ರೈತ

ಶೇ.17ರಷ್ಟು ಮಾತ್ರ ಬಿತ್ತನೆ; ಪೈರು ಒಣಗುವ ಹಂತಕ್ಕೆ | ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.9: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ವಿಜಯಪುರ ಜಿಲ್ಲೆಯಲ್ಲಿ ಬರದ ಆತಂಕ ಗಂಭೀರವಾಗಿದ್ದು, ಬಿತ್ತನೆ ಮಾಡಿರುವ ಪೈರುಗಳು ಒಣಗುವ ಹಂತ ತಲುಪಿವೆ. ಜಿಲ್ಲೆಯಾದ್ಯಂತ ಈವರೆಗೆ ಕೇವಲ ಶೇ.17ರಷ್ಟು ಮಾತ್ರ ಬಿತ್ತನೆಯಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಬಿತ್ತನೆಯೇ ನಡೆದಿಲ್ಲ. ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಧಾವಿಸಲಿದ್ದು, ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ನಿಖರ ಹಾಗೂ ವೈಜ್ಞಾನಿಕ ವರದಿ ಸಿದ್ಧಪಡಿಸುವಂತೆ…

Read More

ಸುಪ್ರೀಂಕೋರ್ಟ್ ತೀರ್ಪಿನಿಂದ ವಿಜಯಪುರ ವಿಮಾನ ನಿಲ್ದಾಣ ಆರಂಭಕ್ಕೆ ಹಸಿರು ನಿಶಾನೆ

ಪರಿಸರ ಅನುಮತಿ ದೊರೆತರೆ ಮೂರು ತಿಂಗಳಲ್ಲಿ ವಿಮಾನ ಹಾರಾಟ ಆರಂಭ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 29: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಕಾನೂನು ತೊಡಕು ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನಿಂದ ಯೋಜನೆಗೆ ಹೊಸ ಚೈತನ್ಯ ಸಿಕ್ಕಿದೆ. ಪರಿಸರ ಸಂಬಂಧಿತ ಅಂತಿಮ ಅನುಮತಿ ನಿರೀಕ್ಷೆಯಂತೆ ದೊರೆತರೆ ಮುಂದಿನ ಮೂರು ತಿಂಗಳೊಳಗೆ ವಿಜಯಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ವಿಶ್ವಾಸವಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ಯುವ ಪ್ರತಿಭೆಗಳ AI ಸ್ಟಾರ್ಟ್‌ಅಪ್‌ಗೆ ಸಚಿವ ಎಂ.ಬಿ. ಪಾಟೀಲ ಚಾಲನೆ

Merakify.ai ವೇದಿಕೆ ಉದ್ಘಾಟನೆ; ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಆರಂಭ ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ಯುವ ಪ್ರತಿಭೆಗಳು ನವೋದ್ಯಮಗಳ ಮೂಲಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದಲ್ಲಿ ಸೋಮವಾರ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರ ಪುತ್ರಿ ಸಾನ್ವಿ ಪಾಟೀಲ ಹಾಗೂ ಅವರ ತಂಡ ಆರಂಭಿಸಿರುವ ಪ್ರವಾಹ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ Merakify.ai ಕೃತಕ ಬುದ್ಧಿಮತ್ತೆ…

Read More

ವಿಶ್ವ ಪರಂಪರೆ ಪಟ್ಟಿಗೆ ಯಾವಾಗ ಸೇರುತ್ತದೆ ವಿಜಯಪುರದ ಹೆಮ್ಮೆಯ ಗೋಳಗುಮ್ಮಟ?

ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದ ವಿಶ್ವಮಾನ್ಯತೆಯ ಕನಸು ಚೇತನ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ಆದಿಲ್‌ಶಾಹಿ ವಾಸ್ತುಶಿಲ್ಪದ ಶ್ರೇಷ್ಠ ಮಾದರಿ, ವಿಶ್ವದ ಅತಿದೊಡ್ಡ ಗುಮ್ಮಟಗಳಲ್ಲಿ ಒಂದಾದ ಗೋಳಗುಮ್ಮಟ ಇಂದು ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಮಾರಕ. ಆದರೆ, ಹಲವು ದಶಕಗಳಿಂದ ಕೇಳಿಬರುತ್ತಿರುವ ಯುನೆಸ್ಕೋ (UNESCO) ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕನಸು ಮಾತ್ರ ಇನ್ನೂ ನನಸಾಗಿಲ್ಲ. ಅಧಿಕಾರಿಗಳ ನಿರಾಸಕ್ತಿ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸಮನ್ವಯದ ಅಭಾವದಿಂದ ಈ ಮಹತ್ವಾಕಾಂಕ್ಷೆಯ ಯೋಜನೆ ವರ್ಷದಿಂದ ವರ್ಷಕ್ಕೆ ಮುಂದೂಡಲ್ಪಡುತ್ತಲೇ ಬಂದಿದೆ.ಗೋಳಗುಮ್ಮಟ…

Read More

ಸಚಿವ ಎಂ. ಬಿ. ಪಾಟೀಲ ಟೆಂಪಲ್ ರನ್

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 8:ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ರವಿವಾರ ನಾನಾ ಧಾರ್ಮಿಕ ಸ್ಥಳಗಳಿಗೆ ತೆರಳಿ ಪೂಜೆ ಸಲ್ಲಿಸಿದರು.ನೂತನ ಸಂಪುಟದಲ್ಲಿ ಸಚಿವರಾದ ನಂತರ ಇದೇ ಮೊದಲ ಬಾರಿಗೆ ತವರು ಜಿಲ್ಲೆ ವಿಜಯಪುರಕ್ಕೆ ಆಗಮಿಸಿದ ಅವರು, ತಿಕೋಟಾ ತಾಲೂಕಿನ ಮುಮ್ಮೆಟ್ಟಿಗುಡ್ಡದಲ್ಲಿರುವ ಶ್ರೀ ಅಮೋಘಸಿದ್ಧೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಮೋಘಸಿದ್ಧೇಶ್ವರ ದೇವಸ್ಥಾನ ತನ್ನ ಐತಿಹಾಸಿಕ ಹಿನ್ನೆಲೆ ಹಾಗೂ ಧಾರ್ಮಿಕ…

Read More

ರಷ್ಯಾದಿಂದ ತೈಲ ಖರೀದಿಗೆ ಅಮೆರಿಕ ಒಪ್ಪಿಗೆ ಕೇಳುವ ಮೋದಿ: ದುರ್ಬಲ ರಾಷ್ಟ್ರದ ಸಂಕೇತ- ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 16:ರಷ್ಯಾದಿಂದ ತೈಲ ಖರೀದಿಗೆ ಪ್ರಧಾನಿ ಅಮೆರಿಕ ಒಪ್ಪಿಗೆ ಕೇಳುವುದು ಸರಿಯಲ್ಲ. ಇದು ಭಾರತ ಎಷ್ಟು ದುರ್ಬಲವಾಗಿದೆ ಎಂಬುದರ ಸಂಕೇತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ನಮ್ಮದು ಸ್ವತಂತ್ರ್ಯ ರಾಷ್ಟ್ರ ಏನು ಮಾಡಬೇಕು. ಎಲ್ಲಿ ಖರೀದಿ ಮಾಡಬೇಕು ಎಂಬುದನ್ನು ಅಮೆರಿಕ ಬಳಿ ಅಡವಿಟ್ಟಿದ್ದರೆ ಇದು ನಮ್ಮ ದುರ್ಭಾಗ್ಯ ಎಂದರು.ಮನಮೋಹನ್ ಸಿಂಗ್ ಪ್ರಧಾನಿ ಇದ್ದಾಗ ಆರ್ಥಿಕ ಪರಿಸ್ಥಿತಿ ಉತ್ತಮವಾಗಿತ್ತು.ಪೆಟ್ರೋಲ್, ಡಿಸೇಲ್, ಅಡುಗೆ ಅನಿಲ,…

Read More

ವೃಕ್ಷ ಅಭಿಯಾನ, ಮೆರಾಥಾನ್‌ ಎಫೆಕ್ಟ್‌:ಬಿರು ಬೇಸಿಗೆಯಲ್ಲೂ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗದ ತಾಪಮಾನಸಚಿವ ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ನಗರದಲ್ಲಿ ಹಲವು ವರ್ಷಗಳಿಂದ ಮೆರಾಥಾನ್‌ ನಡೆಸುತ್ತಿದ್ದೇವೆ. ಇದರಿಂದಾಗಿ ವಿಜಯಪುರದ ವಾತಾವರಣ ಸಂಪೂರ್ಣ ಬದಲಾಗಿದೆ. ಈ ವರ್ಷ ಜಿಲ್ಲೆಯ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಕ್ರಾಸ್‌ ಆಗಿಲ್ಲ. ಇದರಿಂದಾಗಿ ವಿಜಯಪುರಕ್ಕೆ ಗ್ರೇಟರ್‌ ಲುಕ್‌ ಬಂದಿದೆ ಎಂದು ವೃಕ್ಷೋತ್ಥಾನ್‌ ಹಾಗೂ ಮೆರಾಥಾನ್‌ ರೂವಾರಿಯೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ನಗರದ ಬಿಎಲ್‌ ಡಿಇ ಸಂಸ್ಥೆಯಲ್ಲಿ ಶನಿವಾರ ಬ್ಯಾಡ್ಮಿಂಟನ್‌ ಅಂಗಳ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಮೆರಾಥಾನ್‌ ಕೂಡಾ ನಡೆಸುತ್ತಿರುವುದರಿಂದ ವಿಜಯಪುರಕ್ಕೆ ಹೊಸ ಲುಕ್‌…

Read More

ಟಿಕೆಟ್ ಗಿಟ್ಟಿಸಿಕೊಳ್ಳಲು ಯತ್ನಾಳ ಹೊಸ ಪಕ್ಷದ ಬ್ಲಾಕ್ ಮೇಲ್: ಯತ್ನಾಳಗೆ ಸಚಿವ ಎಂಬಿಪಿ ಟಾಂಗ್

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 15 :ಶಾಸಕ ಯತ್ನಾಳರಿಗೆ ಬಿಜೆಪಿ ವ್ಯಾಮೋಹ ಹೋಗಿಲ್ಲ. ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ರೀತಿ ಹೊಸ ಪಕ್ಷದ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಅವರು ಹೊಸ ಪಕ್ಷ ಕಟ್ಟುವುದೇ ಇಲ್ಲ ಬಿಡಿ ಎಂದು ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ ಅವರು ನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳಲು ಈ ಪ್ರಯತ್ನ ಅಲ್ಲ. ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಬೇಕಾದರೆ ಯತ್ನಾಳರು ಪಕ್ಷ ಕಟ್ಟಲಿ ಅದಕ್ಕೆ ಶುಭವಾಗಲಿ. ಅವರು ತಮಿಳುನಾಡಿನ…

Read More

ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ ಕೇಂದ್ರದ ಜವಾಬ್ದಾರಿ: ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 9:ರೇಲ್ವೆ ಕೆಳಸೇತುವೆ ನಿರ್ಮಾಣ ವೇಳೆ ಅಗತ್ಯವಾಗಿರುವ ಸೌಕರ್ಯಗಳ‌ ಸ್ಥಳಾಂತರ(Utility Shifting) ಜವಾಬ್ದಾರಿ ರೇಲ್ವೆ ಇಲಾಖೆಗೆ ಸೇರಿದ್ದು, ಇದರಲ್ಲಿ ರಾಜ್ಯ ಸರಕಾರದ ಪಾತ್ರ ಇರುವುದಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.‌ ಬಿ. ಪಾಟೀಲ ತಿಳಿಸಿದ್ದಾರೆ.ರೇಲ್ವೆ ಇಲಾಖೆ ಕೈಗೊಳ್ಳುವ ಕೆಳಸೇತುವೆ ನಿರ್ಮಾಣ ಸಂದರ್ಭದಲ್ಲಿ ಅಗತ್ಯ ವಿರುವ ವಿದ್ಯುತ್ ಮಾರ್ಗಗಳು, ಒಳಚರಂಡಿ ವ್ಯವಸ್ಥೆ ಹಾಗೂ ಇತರ ಭೂಗತ ಸೌಲಭ್ಯಗಳ ಸ್ಥಳಾಂತರ ಕೆಲಸ ರೇಲ್ವೆ ಇಲಾಖೆ ಕಾಮಗಾರಿಯ ವ್ಯಾಪ್ತಿಯಲ್ಲಿಯೇ ಬರುತ್ತದೆ. ‌ದೇಶಾದ್ಯಂತ…

Read More

ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ:ಎಂಬಿಪಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 7:ಕಾಂಗ್ರೆಸ್ ಪಕ್ಷವೆಂಬುದು ಅನುಭವ ಮಂಟಪ. ಈ ಅನುಭವ ಮಂಟಪದಲ್ಲಿ ಎಲ್ಲ ಜಾತಿ-ಜನಾಂಗಗಳಿಗೆ ಸಮಸ್ಥಾನ. ಆ ಸಾಮಾಜಿಕ ಹಿನ್ನಲೆಯನ್ನು ಅನುಸರಿಸಿ ಬಹಳಷ್ಟು ಹಿಂದುಳಿದ ಸಮಾಜಗಳು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಈ ಕಾರ್ಯ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜಗಳು ಕಾಂಗ್ರೆಸ್ ಪಕ್ಷದ ತೆಕ್ಕೆಗೆ ಬರಲಿವೆ ಎಂದು ಕೈಗಾರಿಕೆ,‌ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಗುರುವಾರ ವಿಜಯಪುರ ನಗರದ ಗೃಹ ಕಚೇರಿಯಲ್ಲಿ ತಿಕೋಟಾ ಪಟ್ಟಣದ ತಳವಾರ…

Read More