ಬರದ ಬೇಗುದಿಗೆ ಸ್ಪಂದನೆ: ರೈತರಿಗೆ ಗರಿಷ್ಠ ಪರಿಹಾರಕ್ಕೆ ವೈಜ್ಞಾನಿಕ ವರದಿ ಶೀಘ್ರ ಸಲ್ಲಿಸಿ
ಎರಡನೇ ದಿನವೂ ಬರಪೀಡಿತ ಪ್ರದೇಶಗಳಿಗೆ ಸಚಿವ ಎಂ.ಬಿ. ಪಾಟೀಲ ಭೇಟಿ; ತೊಗರಿ, ಮೆಕ್ಕೆಜೋಳ, ಈರುಳ್ಳಿ ಬೆಳೆ ಪರಿಶೀಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.10 :ಜಿಲ್ಲೆಯಲ್ಲಿ ತೀವ್ರ ಬರಪರಿಸ್ಥಿತಿಯಿಂದ ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಸ್ಪಂದಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು, ರೈತರಿಗೆ ಸರ್ಕಾರದಿಂದ ಗರಿಷ್ಠ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಬೆಳೆ ಹಾನಿಯ ವೈಜ್ಞಾನಿಕ ವರದಿಯನ್ನು ತ್ವರಿತವಾಗಿ ಸಿದ್ಧಪಡಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.ಜಿಲ್ಲೆಯ ಬರಪರಿಸ್ಥಿತಿ ಹಾಗೂ ಬೆಳೆ…


