ಶಸ್ತ್ರ ಚಿಕಿತ್ಸೆ ಗಾಯ ಗುಣಪಡಿಸಲು ಪ್ಲಾಸ್ಟಿಕ್ ಸರ್ಜರಿ ವರದಾನ: ಡಾ. ಹೊನ್ನುಟಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ಗಾಯಗಳು, ದೋಷಗಳು, ಶಸ್ತ್ರಚಿಕಿತ್ಸೆಯಿಂದಾಗುವ ಕಲೆಗಳನ್ನು ಸರಿಪಡಿಸಲು ಮತ್ತು ವ್ಯಕ್ತಿಯ ಸೌಂದರ್ಯವನ್ನು ಹೆಚ್ಚಿಸಲು ಪ್ಲಾಸ್ಟಿಕ್ ಸರ್ಜರಿ ವರದಾನವಾಗಿದೆ ಎಂದು ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಹೇಳಿದ್ದಾರೆ.ಮಂಗಳವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ.ಪಾಟೀಲ ಸೂಪರ್ ಸ್ಪೇಷಾಲಿಟಿ ಆಶ್ಪತ್ರೆಯಲ್ಲಿ ನಡೆದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.ಈ ಹಿಂದೆ ಮನುಷ್ಯನ‌ ಮುಖಚರ್ಯೆ, ಅಂಗವೀಕಲತೆ ಸೇರಿದಂತೆ ನಾನಾ ವಿಕಲತೆಗಳನ್ನು ಸರಿಪಡಿಸುವುದು ಕಷ್ಟಸಾಧ್ಯವಾಗಿತ್ತು. ಆದರೆ ಇಂದು ವೈದ್ಯಕೀಯ ಕ್ಷೇತ್ರದಲ್ಲಿ ಆಗಿರುವ…

Read More