ವಿಮಾನ ನಿಲ್ದಾಣದ ಶ್ರೇಯಸ್ಸು ಬಿಎಸ್ವೈಗೆ ಸಲ್ಲಬೇಕು: ಗುರುಲಿಂಗಪ್ಪ ಅಂಗಡಿ
ಎಂ.ಬಿ. ಪಾಟೀಲರು ಶ್ರೇಯಸ್ಸು ಪಡೆದುಕೊಳ್ಳುವುದು ಸರಿಯಲ್ಲ ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣದ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಭಗೀರಥ ಪ್ರಯತ್ನವಿದ್ದು, ಸಚಿವ ಡಾ. ಎಂ.ಬಿ. ಪಾಟೀಲರ ಪಾತ್ರ ಅಷ್ಟಾಗಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆರೋಪಿಸಿದರು.ನಗರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2009ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲೇ ವಿಮಾನ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು, 723 ಎಕರೆ ಭೂಸ್ವಾಧೀನ ಸೇರಿದಂತೆ ಯೋಜನೆಗೆ ಅಗತ್ಯವಾದ…


