ಮಳೆ ಅಭಾವ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ಸಚಿವ ಡಾ. ಎಂ.ಬಿ. ಪಾಟೀಲ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜಿಲ್ಲೆಯಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು,…


