ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬಿಜೆಪಿ ಧರಣಿ ಮೂರನೇ ದಿನಕ್ಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಜಿಲ್ಲಾ ಬಿಜೆಪಿಯಿಂದ ನಗರದಲ್ಲಿ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿತು.ಬಿಜೆಪಿ ನಗರ ಮಂಡಲದ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಶೆಟ್ಟಿ ಮಾತನಾಡಿ, ಸಿದ್ದರಾಮಯ್ಯ ಅವರ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಅವರೇ ಒಪ್ಪಿಕೊಂಡಿದ್ದಾರೆ. ಅಂತಹ ಆರೋಪ ಎದುರಿಸಿದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಟೀಕಿಸಿದರು.ಜಿಲ್ಲೆಯ ಬರ ಪರಿಸ್ಥಿತಿಯನ್ನು…


