ಸತೀಶ್ಜಾರಕಿಹೊಳಿಡಿನ್ನರ್ಮೀಟಿಂಗ್ಮಾಡಿರೋದ್ರಲ್ಲಿ, ಎಲ್ಲಸೇರಿರೋದ್ರಲ್ಲಿತಪ್ಪೇನಿದೆ: ಡಿಸಿಎಂಡಿ.ಕೆ. ಶಿವಕುಮಾರ್ಮರುಪ್ರಶ್ನೆ
ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ.19: “ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮರುಪ್ರಶ್ನಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಡಿಸಿಎಂ ಈ ರೀತಿ ಉತ್ತರಿಸಿದರು. ಎಲ್ಲ ಸೇರಿ…


