ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ಮಮದಾಪೂರ ಆದರ್ಶ ಗ್ರಾಮವನ್ನಾಗಿ ರೂಪಿಸಲು ಗ್ರಾಮಸ್ಥರು ಕೈ ಜೋಡಿಸಬೇಕು: ಸಚಿವ ಎಂ.ಬಿ. ಪಾಟೀಲ್

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 9: ಜಿಲ್ಲೆಯ ಮಮದಾಪುರ ಬಳಿ ನಿರ್ಮಿಸಲಾಗಿರುವ ಅರಣ್ಯದ ಪ್ರಕೃತಿಯಲ್ಲಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳು ನೆಲೆಸಿದ್ದು, ಶ್ರೀಗಳ ಆಶಯದಂತೆ ವ್ಯಸನಮುಕ್ತ, ಜಗಳರಹಿತವಾಗಿ ಬದುಕಿ ಆದರ್ಶ ಗ್ರಾಮವನ್ನಾಗಿ ಮಾಡಲು ಈ ಭಾಗದ ಗ್ರಾಮಸ್ಥರು ಕೈ ಜೋಡಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ. ಶನಿವಾರ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅಂದಾಜು ರೂ. 120 ಲಕ್ಷ ವೆಚ್ಚದಲ್ಲಿ ಹೆಸ್ಕಾಂ ನೂತನ ಶಾಖಾಧಿಕಾರಿಗಳ ಕಚೇರಿ ಕಟ್ಟಡ…

Read More

ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9: ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮಸ್ಥರು ಸರಕಾರಿ ಎಂ.ಪಿ.ಎಸ್ ಶಾಲೆಯನ್ನು ಸಿ.ಎಸ್.ಆರ್ ಅನುದಾನದಡಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಿಸಲು ಸರಕಾರ ಆದೇಶ ಹೊರಡಿಸಿದೆ.ಈ ಹಿನ್ನೆಲಯಲ್ಲಿ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಶನಿವಾರ ನಗರದಲ್ಲಿರುವ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಗೃಹ ಕಚೇರಿಗೆ ಆಗಮಿಸಿ ಕೃತಜ್ಞತೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು, ಶಾಲೆಯನ್ನು ಉನ್ನತೀಕರಿಸಿರುವುದು ಸಂತಸ ತಂದಿದೆ. ಇದರಿಂದ…

Read More

ಬ್ರಹ್ಮಕುಮಾರಿ ಈಶ್ವರಿಯ ವಿವಿ ವತಿಯಿಂದ ಸಚಿವ ಎಂ.ಬಿ. ಪಾಟೀಲರಿಗೆ ರಾಖಿ ಕಟ್ಟಿದ ಸಹೋದರಿ ಶೋಭಾ

ಸಪ್ತ ಸಾಗರ ವಾರ್ತೆ, ವಿಜಯಪುರ ಆ. 9: ರಕ್ಷಾ ಬಂಧನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದವರು ಸಚಿವ ಎಂ. ಬಿ. ಪಾಟೀಲ ಅವರಿಗೆ ರಾಖಿ ಕಟ್ಟಿ ಹಬ್ಬದ ಶುಭಾಷಯ ಕೋರಿದರು.ಶನಿವಾರ ಬೆಳಿಗ್ಗೆ ಸಚಿವರ ಗೃಹ ಕಚೇರಿಗೆ ಆಗಮಿಸಿದ ನಗರದ ಬ್ರಹ್ಮಕುಮಾರಿ‌ ಈಶ್ವರಿಯ ವಿವಿ ಪ್ರಕೃತಿ ಕಾಲನಿ ಸೇವಾ ಕೇಂದ್ರ ಸಂಚಾಲಕಿ ಶೋಭಾ‌ ಅವರು ಸಚಿವರಿಗೆ ರಾಖಿ‌ ಕಟ್ಟಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ಪ್ರೇಮ, ವಿಶ್ವಾಸ ಮತ್ತು ರಕ್ಷಣೆಯ ಬಾಂಧವ್ಯವನ್ನು ಪ್ರತಿಬಿಂಬಿಸುವ ಪವಿತ್ರ ಹಬ್ಬ ಸಹೋದರ–ಸಹೋದರಿಯರ ನಡುವಿನ ಆತ್ಮೀಯ…

Read More

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮುಳವಾಡ ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ, ಸದಸ್ಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 15 :ಜಿಲ್ಲೆಯ ಬಸವನ ಬಾಗೇವಾಡಿ ವಿಧಾನಸಭೆ ವ್ಯಾಪ್ತಿಯ ಮುಳವಾಡ ಗ್ರಾಮ ಪಂಚಾಯತಿ ಅಧ್ಯಕ್ಷ- ಉಪಾಧ್ಯಕ್ಷ ಸೇರಿದಂತೆ 6 ಸದಸ್ಯರು ಬಿಜೆಪಿ ತೊರೆದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ವಿಜಯಪುರ ನಗರದಲ್ಲಿರುವ ಸಚಿವ ಶಿವಾನಂದ ಪಾಟೀಲ ಅವರ ಗೃಹ ಕಛೇರಿಗೆ ಆಗಮಿಸಿದ ಮುಳವಾಡ ಗ್ರಾಮ ಪಂಚಾಯತಿ ಬಿಜೆಪಿ ಸದಸ್ಯರು ಅಧ್ಯಕ್ಷ ಬಾಳು ಚಿನಕೇಕರ, ಉಪಾಧ್ಯಕ್ಷೆ ಮಧುಮತಿ ಧನ್ಯಾಳ, ಗ್ರಾಮ ಪಂಚಾಯತಿ…

Read More

ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…

Read More

ಸಚಿವ ಎಂ.ಬಿ. ಪಾಟೀಲ ಪ್ರವಾಸ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 9: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಜು.11ರಿಂದ 14ರ ವರೆಗೆ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಜು.11 ರಂದು ಬೆಳಗ್ಗೆ 10.30ಗಂಟೆಗೆ ಬಬಲೇಶ್ವರ ವಿಧಾನಸಭಾ ಕ್ಷೇತ್ರದ ತಿಕೋಟಾ ತಾಲೂಕಿನ ಕೊರಬು ಗಲ್ಲಿ ರೂ.495 ಲಕ್ಷ ವೆಚ್ಚದಲ್ಲಿ ತುಬಚಿ ಬಬಲೇಶ್ವರ ಏತನೀರಾವರಿ ಯೋಜನೆಯ ಡಿ.ಸಿ-2 ರಿಂದ ಜಂಕ್ಷನ್ ವರೆಗೆ ವ್ಹಾಯಾ ತಿಕೋಟಾ ಕೆರೆ ಮತ್ತು ಕೊರಬು ಗಲ್ಲಿ ಮಸೂತಿ ವರೆಗೆ…

Read More