ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…


