ಸಂತ ರವಿದಾಸರ ತತ್ತ್ವಗಳು ಉತ್ತಮ ಸಮಾಜ ನಿರ್ಮಾಣಕ್ಕೆ ದಾರಿದೀಪ: ಸಂಸದ ಗೋವಿಂದ ಕಾರಜೋಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 2:ಸಂತ ರವಿದಾಸರು ಕಂಡ ಜಾತಿರಹಿತ ಮತ್ತು ಸಮಾನತೆಯ ಸಮಾಜದ ಕನಸನ್ನು ನನಸಾಗಿಸಲು ನಾವೆಲ್ಲರೂ ಬದ್ಧರಾಗಬೇಕಿದೆ ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರು ಕರೆ ನೀಡಿದರು.ನಗರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ಸಂತ ಶಿರೋಮಣಿ ಶ್ರೀ ರವಿದಾಸರ ಜಯಂತಿ’ ಕಾರ್ಯಕ್ರಮದಲ್ಲಿ ರವಿದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.ಭಾರತದ ಭಕ್ತಿ ಪರಂಪರೆಯಲ್ಲಿ ಸಂತ ರವಿದಾಸರ ಸ್ಥಾನ ಹಿರಿದಾದುದು. 15ನೇ ಶತಮಾನದಲ್ಲಿಯೇ ಅವರು ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆಯ…

Read More