ವಿಜಯಪುರ ವಿಮಾನ ನಿಲ್ದಾಣಕ್ಕೆ ಚುರುಕು: ಕೇಂದ್ರ ಸಚಿವರೊಂದಿಗೆ ಜಿಗಜಿಣಗಿ ಮಹತ್ವದ ಚರ್ಚೆ
ಸಪ್ತಸಾಗರ ವಾರ್ತೆ,ನವದೆಹಲಿ/ವಿಜಯಪುರ, ಜು. 31:ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಉಳಿದಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.ಸಂಸತ್ ಅಧಿವೇಶನದ ವೇಳೆ ನಡೆದ ಈ ಭೇಟಿಯಲ್ಲಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅನುಮತಿ ಹಾಗೂ ಪರಿಸರ ಸಂಬಂಧಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಗಜಿಣಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ…


