ವಿಜಯಪುರ ವಿಮಾನ ನಿಲ್ದಾಣಕ್ಕೆ ಚುರುಕು: ಕೇಂದ್ರ ಸಚಿವರೊಂದಿಗೆ ಜಿಗಜಿಣಗಿ ಮಹತ್ವದ ಚರ್ಚೆ

ಸಪ್ತಸಾಗರ ವಾರ್ತೆ,ನವದೆಹಲಿ/ವಿಜಯಪುರ, ಜು. 31:ವಿಜಯಪುರ ವಿಮಾನ ನಿಲ್ದಾಣದ ಕಾರ್ಯಾರಂಭಕ್ಕೆ ಉಳಿದಿರುವ ತಾಂತ್ರಿಕ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಂಸದ ರಮೇಶ ಜಿಗಜಿಣಗಿ ಅವರು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು.ಸಂಸತ್ ಅಧಿವೇಶನದ ವೇಳೆ ನಡೆದ ಈ ಭೇಟಿಯಲ್ಲಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅನುಮತಿ ಹಾಗೂ ಪರಿಸರ ಸಂಬಂಧಿತ ಪ್ರಕ್ರಿಯೆಗಳನ್ನು ತ್ವರಿತಗೊಳಿಸುವಂತೆ ಜಿಗಜಿಣಗಿ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ…

Read More

ಟಿಇಟಿ ರದ್ದುಪಡಿಸಲು ಸಂಸತ್ತಿನಲ್ಲಿ ಧ್ವನಿ ಎತ್ತಿ: ಸಂಸದ ಜಿಗಜಿಣಗಿ ಅವರಿಗೆ ಶಿಕ್ಷಕರ ಸಂಘ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಂಕಷ್ಟ ಉಂಟುಮಾಡುತ್ತಿರುವ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ)ಯನ್ನು ರದ್ದುಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಹಾಗೂ ಈ ವಿಷಯವನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಜಯಪುರ ಜಿಲ್ಲಾ ಘಟಕವು ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿತು.ಜಿಲ್ಲಾ ಅಧ್ಯಕ್ಷ ಅರ್ಜುನ ಲಮಾಣಿ ಹಾಗೂ ಪ್ರಧಾನ ಕಾರ್ಯದರ್ಶಿ ಹಣಮಂತ ಕೊಣದಿ ಮಾತನಾಡಿ, ಈಗಾಗಲೇ ಸಿಇಟಿ ಹಾಗೂ ಟಿಇಟಿ ಉತ್ತೀರ್ಣರಾಗಿ ಸೇವೆಗೆ ಸೇರಿರುವ…

Read More

ಜಿಲ್ಲಾ ಮಟ್ಟದ ಆಸ್ಮಿತಾ ವುಮೆನ್ಸ್ ಸೈಕ್ಲಿಂಗ್ ಲೀಗ್‌ಗೆ ಸಂಸದ ರಮೇಶ ಜಿಗಜಿಣಗಿ ಚಾಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ಸೈಕ್ಲಿಂಗ್ ಕ್ರೀಡೆಗೆ ರಾಜ್ಯದಲ್ಲೇ ವಿಶಿಷ್ಟ ಗುರುತನ್ನು ಹೊಂದಿರುವ ವಿಜಯಪುರ ನಗರದಲ್ಲಿ ಜಿಲ್ಲಾ ಮಟ್ಟದ ಆಸ್ಮಿತಾ ಖೇಲೋ ಇಂಡಿಯಾ ಮಹಿಳಾ ಸೈಕ್ಲಿಂಗ್ ಸಿಟಿ ಲೀಗ್ ಸ್ಪರ್ಧೆಯನ್ನು ಶನಿವಾರ ಅದ್ಧೂರಿಯಾಗಿ ಆಯೋಜಿಸಲಾಯಿತು.ಕೇಂದ್ರ ಸರ್ಕಾರದ ಕ್ರೀಡಾ ಪ್ರಾಧಿಕಾರ, ಸೈಕ್ಲಿಂಗ್ ಫೆಡರೇಷನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಶನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಶನ್, ವಿಶಾಲ್ ಸೈಕಲ್ ಮಾಲ್, ಜಿಲ್ಲಾಡಳಿತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಲೀಗ್‌ಗೆ ಸಂಸದ…

Read More

ವಿಜಯಪುರ ಜಿಲ್ಲೆಗೆ ಕೇಂದ್ರದಿಂದ 153 ಕೋಟಿ ರೂ. ಮಂಜೂರು-ಸಂಸದ ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 27:ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ವಿಜಯಪುರಕ್ಕೆ ವಿವಿಧ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳಿಗಾಗಿ ಆರ್ ಐಡಿ ನಬಾರ್ಡ್ ನಡಿ 153 ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದರಾರದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿಗಾಗಿ ಕಡಿಮೆ ವೆಚ್ಚದ ಸಾಲ ಸಹಾಯವಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ ವಿಜಯಪುರ ಜಿಲ್ಲೆಗೆ 153.5 ಕೋಟಿ…

Read More

ಸಮಾಜದಲ್ಲಿ ಗೌರವ ಸ್ಥಾನ ಹೊಂದಿರುವ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ-ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5:ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಪಾತ್ರ ಸಮಾಜದಲ್ಲಿ ಮಹತ್ವದ್ದಾಗಿದ್ದು, ಶಿಕ್ಷಕರಿಗೆ ಸಮಾಜದಲ್ಲಿ ಬಹಳ ಗೌರವದ ಸ್ಥಾನವಿದ್ದು, ಶಿಕ್ಷಕರು ನಿರ್ವಹಿಸುವ ಕಾರ್ಯ ಅನನ್ಯವಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗ ಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯ ಹಾಗೂ ನಗರ ವಲಯ ವಿಜಯಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರ ಸಹಯೋಗದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಪ್ರಯುಕ್ತ…

Read More

ವಿಜಯಪುರ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗ: ಸಂಸದ ರಮೇಶ ಜಿಗಜಿಣಗಿ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 24:ಸಂಸದ ರಮೇಶ ಜಿಗಜಿಣಗಿ ಅವರುದೆಹಲಿಯಲ್ಲಿ ರೈಲ್ವೆ ಮಂತ್ರಿ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಜಿಲ್ಲೆಯಲ್ಲಿ ಹೊಸ ರೈಲು ಮಾರ್ಗಗಳ ಸ್ಥಾಪನೆಗೆ ಮನವಿ ಮಾಡಿಕೊಂಡರು. ಆಲಮಟ್ಟಿ- ಇಲಕಲ್ -ಕೊಪ್ಪಳದಿಂದ ಚಿತ್ರದುರ್ಗವರೆಗೆ ಹೊಸ ರೈಲ್ವೆ ಮಾರ್ಗವನ್ನು ಮಾಡುವಂತೆ ಸುಧೀರ್ಘವಾಗಿ ಚರ್ಚಿಸಿ ರೈಲ್ವೆ ಸಚಿವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಕೇಂದ್ರ ಮಂತ್ರಿ ಪ್ರಹ್ಲಾದ್ ಜೋಶಿ ಹಾಗೂ ವಿ. ಸೋಮಣ್ಣ ಮತ್ತು ಬಾಗಲಕೋಟೆ ಜಿಲ್ಲೆಯ ಸಂಸದಪಿ. ಸಿ. ಗದ್ದಿಗೌಡರ ಅವರು ಸೇರಿದಂತೆ ಆಲಮಟ್ಟಿ, ಇಲಕಲ್ ಮತ್ತು ಕೊಪ್ಪಳದಿಂದ…

Read More