ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…

Read More

ಬೀದಿಯಲ್ಲಿ ತ್ಯಾಜ್ಯ ಎಸೆದರೆ, ಪಾಲಿಕೆಯಿಂದ ಕಾನೂನು ಕ್ರಮ-ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಮೇ 18:ಮಾಂಸ ಮಾರಾಟದ ವರ್ತಕರು, ಉದ್ದಿಮೆದಾರರು ಇತರೆ ತ್ಯಾಜ್ಯವನ್ನು ಬೀದಿಯಲ್ಲಿ ಅಥವಾ ವರಾಂಡದಲ್ಲಿ ಎಸೆಯುವುದು ಹಾಗೂ ಹಾಕುವುದನ್ನು ಮಹಾನಗರ ಪಾಲಿಕೆ ನಿಷೇಧಿಸಿದ್ದು, ಆದಾಗ್ಯೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವುದು ಕಂಡು ಬಂದಲ್ಲಿ ಕಾನೂನು ಕ್ರಮ‌ ಕೈಗೊಳ್ಳಲಾಗುವುದು ಎಂದು ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರರು ಎಚ್ಚರಿಕೆ ನೀಡಿದ್ದಾರೆ.ತ್ಯಾಜ್ಯ ಉತ್ಪಾದಿಸುವ ಪ್ರತಿಯೊಬ್ಬ ನಾಗರಿಕರು, ಉದ್ದಿಮೆದಾರರು ಎಲ್ಲೆಂದರಲ್ಲಿ ತ್ಯಾಜ್ಯ ವಿಸರ್ಜಿಸದೆ ತ್ಯಾಜ್ಯ ವಿಂಗಡಣೆ ಮಾಡಬೇಕು. ವಿಂಗಡಣೆ ಮಾಡಿದ ತ್ಯಾಜ್ಯವನ್ನು ಮಹಾ ನಗರಪಾಲಿಕೆ ದಿನನಿತ್ಯ ಕಳುಹಿಸಿಕೊಡುವ ತ್ಯಾಜ್ಯ ವಾಹನಕ್ಕೆ…

Read More

ಮಹಾನಗರ ಪಾಲಿಕೆಯ ಆಸ್ತಿ ತೆರಿಗೆ ಶೇ.3ರಷ್ಟು ಹೆಚ್ಚಳ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.13: ಕರ್ನಾಟಕ ಪೌರನಿಗಮಗಳ ಅಧಿನಿಯಮಯನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇ. 3ರಿಂದ 5 ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಅವಕಾಶ ಇರುವುದರಿಂದ 2026-27ನೇ ವರ್ಷಕ್ಕೆ ಅನ್ವಯವಾಗುವಂತೆ 01-4-2026ರಿಂದ 31-03-2027ರವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು ದಿ:01-04-2026ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇ.3…

Read More

ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಫೆ.8:ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಶನಿವಾರ ಸಂಜೆ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶಿಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿಜಯಪುರ ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಿ.ಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ…

Read More