ಕೊಲೆ ಆರೋಪಿಗಳಿಬ್ಬರ ಮೇಲೆ ಪೊಲೀಸರಿಂದ ಗುಂಡಿನ ದಾಳಿ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 15:ನಿನ್ನೆಯಷ್ಟೇ ನಗರದಲ್ಲಿ ನಡೆದ ಸುಶೀಲ್ ಕಾಳೆ ಕೊಲೆ ಪ್ರಕರಣದ ಇಬ್ಬರು ಆರೋಪಿಗಳನ್ನು ಹಿಡಿಯಲು ಹೋದಾಗ ಪೊಲೀಸರ ಮೇಲೆ ಕಲ್ಲು, ಕಂಟ್ರಿ ಪಿಸ್ತೂಲ್ ನಿಂದ ಆರೋಪಿಗಳು ದಾಳಿ ನಡೆಸಿದಾಗ ಪೊಲೀಸರು ಪ್ರತಿಯಾಗಿ ಆರೋಪಿಗಳಿಬ್ಬರ ಮೇಲೆ ಗುಂಡು ಹಾರಿಸಿದ್ದು, ಅವರ ಕಾಲುಗಳಿಗೆ ಗಾಯಗಳಾದ ಘಟನೆ ಮಂಗಳವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಟ್ಟಂಗಿಹಾಳ ರಸ್ತೆಯಲ್ಲಿ ನಡೆದಿದೆ.ಆಕಾಶ ಕಲ್ಲವ್ವಗೋಳ (24), ಸುಭಾಸ ಬಗಲಿ (20) ಗಾಯಗೊಂಡ ಆರೋಪಿಗಳು.ಇಬ್ಬರು ಆರೋಪಿಗಳಿಗೆ ಕಾಲಿಗೆ ಗುಂಡು ತಗಲಿದ್ದು, ಆರೋಪಿಗಳನ್ನು ಜಿಲ್ಲಾ…


