ದೇಶ ಕಟ್ಟುವಲ್ಲಿ ಶಿಕ್ಷಕರ ಪಾತ್ರ ಅನನ್ಯ: ಎಸ್ಪಿ ನಿಂಬರಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 18:ದೇಶ ಕಾಯುವ ಸೈನಿಕರು ಜೈ ಜವಾನ್. ಅನ್ನ ನೀಡುವ ರೈತರು ಜೈ ಕಿಸಾನ್. ಅದೇ ರೀತಿ ದೇಶ ಕಟ್ಟುವ ಶಿಕ್ಷಕರು ಜೈ ಶಿಕ್ಷಕ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು.ದೇಶ ಕಟ್ಟುವುದು ಮತ್ತು ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾಗಿದೆ. ಪಾಲಕರನ್ನು ಹೊರತುಪಡಿಸಿದರೆ ಮಕ್ಕಳು…


