ಸಂವಿಧಾನ, ಡಾ. ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನ:ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 27 :ಇಲ್ಲಿನ ಜಲನಗರದ ಬಿ.ಡಿ.ಎ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರತ್ಥಾನ ಹಿಂದೂ ಸಮ್ಮೇಳನದಲ್ಲಿ ಆರ್. ಎಸ್. ಎಸ್. ಮುಖಂಡನೊಬ್ಬ “ಈ ದೇಶ ಎಂದರೆ ಸಂವಿಧಾನವಲ್ಲ, ರಾಷ್ಟ್ರಧ್ವಜವಲ್ಲ, ಕೇವಲ ಅಂಬೇಡ್ಕರ್ ಅಲ್ಲ” ಎಂಬ ಅತಿರೇಕದ, ಅಪಮಾನಕಾರಕ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ಹೇಳಿಕೆ ದೇಶದ ಸಂವಿಧಾನ, ರಾಷ್ಟ್ರಧ್ವಜ ಹಾಗೂ ಈ ದೇಶದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ನೇರವಾಗಿ ಅವಮಾನ ಮಾಡುವಂತಿದ್ದು, ದೇಶದ ಏಕತೆ-ಅಖಂಡತೆಗೆ ಧಕ್ಕೆ ತರುವ ದೇಶದ್ರೋಹಿ…


