ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ರಾಷ್ಟ್ರಧ್ವಜಾರೋಹಣ

ಸಪ್ತಸಾಗರ ವಾರ್ತೆ,ವಿಜಯಪುರ, ಆ.15:ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.ನಂತರ ಮಾತನಾಡಿದ ಅವರು, ದೇಶ ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯವು ಸುಲಭವಾಗಿ ದೊರೆತದ್ದಲ್ಲ. ಅಸಂಖ್ಯಾತ ವೀರ ಧೀರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ. ಇಂತಹ ಮಹನೀಯರ ತ್ಯಾಗವನ್ನು ಸ್ಮರಿಸಿ, ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.ವಿಜಯಪುರ ಜಿಲ್ಲೆಯ ಗಾಂಧಿ ಭವನವು ಮಾದರಿಯ ತಾಣವಾಗಿದ್ದು,…

Read More

ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ: ಪ್ರೊ. ದೊಡ್ಡಣ್ಣ ಬಜಂತ್ರಿ

ಸಪ್ತಸಾಗರ ವಾರ್ತೆ,ತಿಕೋಟಾ, ಆ.5: ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ತ್ಯಾಗ, ಶಾಂತಿ, ಸತ್ಯ ಹಾಗೂ ಸಮೃದ್ಧಿಯ ಪ್ರತೀಕವಾಗಿದ್ದು, ಅದಕ್ಕೆ ಗೌರವ ಸಲ್ಲಿಸುವುದೇ ನಿಜವಾದ ದೇಶಸೇವೆ ಎಂದು ಪ್ರೊ. ದೊಡ್ಡಣ್ಣ ಬಜಂತ್ರಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ನ್ಯೂ ಆರ್ಟ್ಸ್ ಕಾಲೇಜಿನಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ರವಿ ಕಿತ್ತೂರ ಹಾಗೂ ವಿಭಾಗೀಯ ಸಂಯೋಜಕ ಮೋಹನ ಕಟ್ಟಿಮನಿ ಅವರ ಆಯೋಜನೆಯಲ್ಲಿ, ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ ವಿಜಯಪುರ ಇವರ ಸಹಯೋಗದಲ್ಲಿ ರಾಷ್ಟ್ರಧ್ವಜ…

Read More

ಸಂವಿಧಾನ, ಡಾ. ಅಂಬೇಡ್ಕರ್ ಹಾಗೂ ರಾಷ್ಟ್ರಧ್ವಜಕ್ಕೆ ಅಪಮಾನ:ತಕ್ಷಣ ಕಠಿಣ ಕಾನೂನು ಕ್ರಮಕ್ಕೆ ಡಿ.ವಿ.ಪಿ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 27 :ಇಲ್ಲಿನ ಜಲನಗರದ ಬಿ.ಡಿ.ಎ ಖಾಲಿ ಜಾಗದಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರತ್ಥಾನ ಹಿಂದೂ ಸಮ್ಮೇಳನದಲ್ಲಿ ಆರ್. ಎಸ್. ಎಸ್. ಮುಖಂಡನೊಬ್ಬ “ಈ ದೇಶ ಎಂದರೆ ಸಂವಿಧಾನವಲ್ಲ, ರಾಷ್ಟ್ರಧ್ವಜವಲ್ಲ, ಕೇವಲ ಅಂಬೇಡ್ಕರ್ ಅಲ್ಲ” ಎಂಬ ಅತಿರೇಕದ, ಅಪಮಾನಕಾರಕ ಹೇಳಿಕೆ ನೀಡಿರುವುದು ಅತ್ಯಂತ ಖಂಡನೀಯವಾಗಿದೆ. ಈ ಹೇಳಿಕೆ ದೇಶದ ಸಂವಿಧಾನ, ರಾಷ್ಟ್ರಧ್ವಜ ಹಾಗೂ ಈ ದೇಶದ ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ನೇರವಾಗಿ ಅವಮಾನ ಮಾಡುವಂತಿದ್ದು, ದೇಶದ ಏಕತೆ-ಅಖಂಡತೆಗೆ ಧಕ್ಕೆ ತರುವ ದೇಶದ್ರೋಹಿ…

Read More