ರಾಷ್ಟ್ರಧ್ವಜ ಗೌರವವೇ ರಾಷ್ಟ್ರಗೌರವ: ರಾಷ್ಟ್ರೀಯ ಧ್ವಜ ದಿನ ಆಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಕಾಲೇಜು, ಕವಲಗಿಯಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಿದ ಐತಿಹಾಸಿಕ ದಿನವನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಕಾಲೇಜಿನ ಪ್ರಾಚಾರ್ಯರಾದ ಹೇಮಂತ್ ಕೃಷ್ಣ ಮಾತನಾಡಿ, “ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ಸ್ವಾತಂತ್ರ್ಯದ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ಗೌರವ…


