ವಂದೇ ಮಾತರಂ ಮಸೂದೆಗೆ ಕಾಂಗ್ರೆಸ್ ವಿರೋಧ: ‘ಡೋಂಗಿ ರಾಷ್ಟ್ರೀಯವಾದ’ ಬಯಲಾಗಿದೆ – ರಮೇಶ ಜಿಗಜಿಣಗಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ವಿಧಿಸುವ ಉದ್ದೇಶದಿಂದ ಮಂಡಿಸಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026’ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ಅದರ “ಡೋಂಗಿ ರಾಷ್ಟ್ರೀಯವಾದ”ವನ್ನು ಬಯಲಿಗೆಳೆದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದ ಹಾಗೂ ಕ್ರಾಂತಿಕಾರಿಗಳ ಧ್ಯೇಯಗೀತೆಯಾಗಿದ್ದ ಬಂಕಿಮಚಂದ್ರ ಚಟರ್ಜಿ ವಿರಚಿತ ‘ವಂದೇ ಮಾತರಂ’ಗೆ ಗೌರವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಸೂದೆ ಮಂಡಿಸಿದೆ ಎಂದು ಹೇಳಿದರು.ರಾಜ್ಯಸಭೆಯಲ್ಲಿ ಮಸೂದೆ…


