ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲು ವಿದ್ಯಾರ್ಥಿ ಸಂಘಟನೆ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಮೇ. 16 :ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮದಿಂದಾಗಿ ನೀಟ್ ಅವ್ಯವಸ್ಥೆ ಆಗರವಾಗಿದೆ. ಬಡ ವಿದ್ಯಾರ್ಥಿಗಳಿಗೆ ದೊಡ್ಡ ಮೋಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪ್ರಸ್ತುತ ರೂಪದಲ್ಲಿರುವ ನೀಟ್ ಪರೀಕ್ಷೆಯನ್ನು ವಿರೋಧಿಸುವ ನಿರ್ಣಯವನ್ನು ವಿಧಾನಸಭೆಯಲ್ಲಿ ಅಂಗೀಕರಿಸಬೇಕು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಶೈಲ ತೇಲಿ ಒತ್ತಾಯಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವೈದ್ಯರಾಗ ಬಯಸುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ಹಾಗೂ ಮಧ್ಯಮ ವರ್ಗದ…

Read More