ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ: ಪ್ರೊ. ದೊಡ್ಡಣ್ಣ ಬಜಂತ್ರಿ

ಸಪ್ತಸಾಗರ ವಾರ್ತೆ,ತಿಕೋಟಾ, ಆ.5: ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ, ತ್ಯಾಗ, ಶಾಂತಿ, ಸತ್ಯ ಹಾಗೂ ಸಮೃದ್ಧಿಯ ಪ್ರತೀಕವಾಗಿದ್ದು, ಅದಕ್ಕೆ ಗೌರವ ಸಲ್ಲಿಸುವುದೇ ನಿಜವಾದ ದೇಶಸೇವೆ ಎಂದು ಪ್ರೊ. ದೊಡ್ಡಣ್ಣ ಬಜಂತ್ರಿ ಹೇಳಿದರು.ಪಟ್ಟಣದ ಬಿ.ಎಲ್.ಡಿ.ಇ. ನ್ಯೂ ಆರ್ಟ್ಸ್ ಕಾಲೇಜಿನಲ್ಲಿ ದಲಿತ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ವಿಜಯಪುರದ ಅಧ್ಯಕ್ಷ ರವಿ ಕಿತ್ತೂರ ಹಾಗೂ ವಿಭಾಗೀಯ ಸಂಯೋಜಕ ಮೋಹನ ಕಟ್ಟಿಮನಿ ಅವರ ಆಯೋಜನೆಯಲ್ಲಿ, ಮಹಾವಿದ್ಯಾಲಯದ ಐಕ್ಯೂಎಸಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಭಾರತ ಸೇವಾದಳ ವಿಜಯಪುರ ಇವರ ಸಹಯೋಗದಲ್ಲಿ ರಾಷ್ಟ್ರಧ್ವಜ…

Read More

ಸಚಿವ ಸ್ಥಾನ ಅತೃಪ್ತಿ: ರಾಜೀನಾಮೆ ಕೊಟ್ಟರೆ ಕ್ಷಣದಲ್ಲೇ ಅಂಗೀಕಾರ – ಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 4: ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ಶಾಸಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ. “ರಾಜೀನಾಮೆ ಕೊಡುವವರನ್ನು ಯಾರೂ ತಡೆಯಲು ಸಾಧ್ಯವಿಲ್ಲ. ಯಾರಾದರೂ ರಾಜೀನಾಮೆ ನೀಡಿದರೆ ಕ್ಷಣದಲ್ಲೇ ಅಂಗೀಕರಿಸುತ್ತೇನೆ. ರಾಜಕೀಯದಲ್ಲಿ ತಾಳ್ಮೆ ಅತ್ಯಂತ ಮುಖ್ಯ, ಪಕ್ಷವೇ ಮೊದಲ ಆದ್ಯತೆ” ಎಂದು ಹೇಳಿದರು.ಸದಾಶಿವನಗರ ನಿವಾಸದ ಬಳಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಈ ಹಿಂದೆ ನನಗೂ, ಪರಮೇಶ್ವರ್ ಅವರಿಗೂ ಧರಂಸಿಂಗ್ ಹಾಗೂ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವ…

Read More

ಸಾಮಾಜಿಕ ಭದ್ರತಾ ಪಿಂಚಣಿಗೆ ₹30 ಸಾವಿರ ಆದಾಯ ಮಿತಿ ಹಿಂಪಡೆಯಿರಿ: ಅಪ್ಪುರಾಜ್ ನಿಮಾದಾರ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ,ಜು. 31:ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳಿಗೆ ₹30 ಸಾವಿರ ವಾರ್ಷಿಕ ಆದಾಯ ಮಿತಿ ನಿಗದಿಪಡಿಸಿರುವ ಕ್ರಮವನ್ನು ಹಿಂಪಡೆದು, ಅದನ್ನು ಕನಿಷ್ಠ ₹35 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಭೀಮ್ ರಾಜ್ಯ ದಲಿತ್ ಸೇವಾ ಸಮಿತಿ(ರಿ) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ, ನಿರ್ಗತಿಕ ವಿಧವಾ ವೇತನ, ಅಂಗವಿಕಲರ ಪಿಂಚಣಿ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಿಗೆ ನಿಗದಿಪಡಿಸಿರುವ…

Read More

ಪುನರ್ವಸತಿ ವಿಳಂಬ ಬೇಡ; ಮೂಲಸೌಕರ್ಯ ಕಲ್ಪಿಸಿ ಕಾಮಗಾರಿ ತ್ವರಿತಗೊಳಿಸಿ

ಖಾಜಾ ನಗರ–ಟಿಪ್ಪು ನಗರದ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಡಳಿತಕ್ಕೆ ದಲಿತ ಸ್ವರಾಜ್ಯ ಸೇನೆ ಆಗ್ರಹ ಸಪ್ತಸಾಗರ ವಾರ್ತೆ,ವಿಜಯಪುರ, ಜು.31:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಿ, ಮಂಜೂರಾಗಿರುವ ಜಾಗದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕೂಡಲೇ ಕಲ್ಪಿಸುವಂತೆ ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಬುರಣಾಪುರ ಗ್ರಾಮದ ಸರ್ವೇ ನಂ.67/1ರಲ್ಲಿ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರು ಮಾಡಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಸಂಘಟನೆ ಸ್ವಾಗತಿಸಿದ್ದು, ಜಮೀನು ಮಂಜೂರಿನಲ್ಲೇ…

Read More

12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಕವಿಗೋಷ್ಠಿಗೆ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. ಅ. 1: ಜಿಲ್ಲೆಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ, ನಾಡಿನ ಕವಿಗಳಿಂದ ನಮಗೆ ಸರಕಾರಿ ವೈದ್ಯಕೀಯ ಮಹಾವಿದ್ಯಾಲಯ ಕೊಡಿ ಎಂಬ ವಿಷಯದ ಕುರಿತು(ಅಕ್ಟೋಬರ್-5)ರಂದು ಮುಂಜಾನೆ 10ಗಂಟೆಗೆ ಅಂಬೇಡ್ಕರ್ ವೃತ್ತದಲ್ಲಿಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ಕವಿಗೋಷ್ಠಿಯಲ್ಲಿ ಭಾಗವಹಿಸುವ ಕವಿಗಳು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಅಥವಾ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ಸಂಬಂಧಪಟ್ಟ ವಿಷಯದ ಕುರಿತು ಕವನ ವಾಚಿಸಬಹುದು.ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ, ವಿಜಯಪುರ ಪರವಾಗಿ ಹೆಸರು ನೋಂದಾಯಿಸಿಕೊಳ್ಳಲು ಮೊ. 72042 79187 ,96320…

Read More